ಪ್ರತಿಭಟನೆ ವೇಳೆ ಮಾತನಾಡಿದ ದಿನೇಶ್ ಗುಂಡೂರಾವ್ 
ರಾಜಕೀಯ

ಈ ದೇಶದಲ್ಲಿ ಪ್ರಧಾನಿ ಮೋದಿಯವರ ಗಡ್ಡ ಮತ್ತು ಪೆಟ್ರೋಲ್ ಬೆಲೆ ಬೆಳೆಯುತ್ತಲೇ ಇದೆ: ದಿನೇಶ್ ಗುಂಡೂರಾವ್

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಶುಕ್ರವಾರದಿಂದ 5 ದಿನಗಳ ಕಾಲ ದೇಶಾದ್ಯಂತ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಶುಕ್ರವಾರದಿಂದ 5 ದಿನಗಳ ಕಾಲ ದೇಶಾದ್ಯಂತ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ಹಮ್ಮಿಕೊಂಡಿದೆ.

ಪ್ರತಿಭಟನೆ ವೇಳೆ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಶಾಸಕ ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ. ಕಳೆದ ಏಳು ವರ್ಷಗಳಲ್ಲಿ ಮೋದಿ ಸರ್ಕಾರ ಬಂದ ಮೇಲೆ ದೇಶದ ಜನರು ಇನ್ನಷ್ಟು ಕಷ್ಟ ಅನುಭವಿಸುತ್ತಿದ್ದಾರೆ. ಜನರಿಗೆ ಎಷ್ಟೇ ತೊಂದರೆ ಕೊಟ್ಟರೂ, ಎಷ್ಟೇ ಸಮಸ್ಯೆಯಾದರೂ ಕೂಡ ವೋಟ್ ಹಾಕುತ್ತಾರೆ ಎಂದು ಮೋದಿ ಭಾವಿಸಿದ್ದಾರೆ. ಜನರ ಸಮಸ್ಯೆಗಳಿಗೆ ಗಮನ ಕೊಡಬೇಕಾಗಿಲ್ಲ ಎಂಬ ಉಡಾಫೆ ಧೋರಣೆ ತಳೆದಿದ್ದಾರೆ. ಕಣ್ಣು-ಕಿವಿ, ಬಾಯಿ ಇಲ್ಲದಿರುವ ಸರ್ಕಾರವೆಂದರೆ ಅದು ಮೋದಿ ಸರ್ಕಾರ ಎಂದು ಟೀಕಿಸಿದರು.

ಮೋದಿ ನೋಟ್ ಬ್ಯಾನ್ ಮಾಡಿ ಜನರನ್ನ ಕ್ಯೂನಲ್ಲಿ ನಿಲ್ಲಿಸಿದರು. ಕೋವಿಡ್ ಬಂದು ಜನರ ಪರಿಸ್ಥಿತಿ ಅಯೋಮಯವಾಗಿದೆ. ಮೋದಿ ಅವರ ಬಿಳಿ ಗಡ್ಡ, ಪೆಟ್ರೋಲ್ ಬೆಲೆ ಮಾತ್ರ ಬೆಳೆಯುತ್ತಿದೆ. ಈ ರೀತಿಯ ಆಡಳಿತ ದೇಶದ ಪರಿಸ್ಥಿತಿಯನ್ನು ಹದಗೆಡಿಸಿದೆ. ಅವರು ತಾನೊಬ್ಬ ನಾಯಕ, ಮಹಾ ನಾಯಕ ಅಂದುಕೊಂಡಿದ್ದಾರೆ. ತಮ್ಮ ಹೆಸರಲ್ಲಿ ಸ್ಟೇಡಿಯಂ ಕಟ್ಟಿಸಿಕೊಂಡಿದ್ದಾರೆ. ಇದು ಕಿವುಡ, ಮೂಕ ಸರ್ಕಾರ. ಮನಮೋಹನ್ ಸಿಂಗ್ ಇದ್ದಾಗ ಕಚ್ಚಾ ತೈಲ ಬೆಲೆ ಹೆಚ್ಚಾಗಿತ್ತು, ಆದರೂ ಕಡಿಮೆ ಬೆಲೆಯಲ್ಲಿ ಪೆಟ್ರೋಲ್ ನೀಡಲಾಗುತ್ತಿತ್ತು. ಈಗ ಕಡಿಮೆ ದರ ಇದ್ದರೂ ಹೆಚ್ಚು ಬೆಲೆಗೆ ಮಾರಲಾಗುತ್ತಿದೆ ಎಂದು ಆರೋಪಿಸಿದರು.

ಮೋದಿಗೆ ಅಭಿನಂದನೆ: ಇಂದು ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ, ಇದಕ್ಕಾಗಿ ಮೋದಿಯವರಿಗೆ ಅಭಿನಂದನೆಗಳು, ಬಹಳ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ನೀವು ಅಧಿಕಾರಕ್ಕೆ ಬಂದ ಮೇಲೆ ನಿಮ್ಮ ಬಿಳಿ ಗಡ್ಡ ಮತ್ತು ಪೆಟ್ರೋಲ್ ಬೆಲೆ ಬಹಳ ಚೆನ್ನಾಗಿ ಏರುತ್ತಿದೆ ಎಂದು ವ್ಯಂಗ್ಯವಾಡಿದರು.

ಪೆಟ್ರೋಲ್ ಬೆಲೆ ಹೆಚ್ಚಳದಿಂದ ಈ ದೇಶದ ಪ್ರತಿಯೊಬ್ಬ ನಾಗರಿಕನ ಮೇಲೆ ಪರಿಣಾಮ ಬೀರುತ್ತಿದೆ. ಹಿಂದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕೇಂದ್ರದಲ್ಲಿದ್ದಾಗ ಪೆಟ್ರೋಲ್, ಡೀಸೆಲ್ ದರ 2 ರೂಪಾಯಿ, 3 ರೂಪಾಯಿ ಹೆಚ್ಚಳವಾದಾಗ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಮೊದಲಾದವರೆಲ್ಲ ಪ್ರತಿಭಟನೆ ಮಾಡಿದ್ದರು, ಈಗ ಬರೀ 6 ತಿಂಗಳಲ್ಲಿ 42 ಬಾರಿ ಏರಿಕೆಯಾಗಿ 100 ರೂಪಾಯಿಯಾಗಿದೆ, ಇವತ್ತು ಎಲ್ಲಾ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT