ಸಚಿವ ಕೆ.ಸುಧಾಕರ್ 
ರಾಜಕೀಯ

ಗಂಡ-ಹೆಂಡತಿ ನಡುವೆಯೇ ಅಸಮಾಧಾನವಿರತ್ತೆ, ದೊಡ್ಡ ಪಕ್ಷದಲ್ಲಿ ಇರಲ್ಲ ಅಂದ್ರೆ ಹೇಗೆ? ಸಚಿವ ಸುಧಾಕರ್ ಪ್ರಶ್ನೆ

ಗಂಡ ಹೆಂಡತಿಯನಡುವೇ ಜಗಳ, ಅಸಮಾಧಾನಗಳಿರುತ್ತದೆ ಅಂಥದ್ದರಲ್ಲಿ ದೊಡ್ಡ ಪಕ್ಷದಲ್ಲಿ ಅಸಮಾಧಾನ ಇರಬಾರದೆನ್ನಲು ಆಗುವುದೆ? ಪಕ್ಷದಲ್ಲಿನ ಎಲ್ಲಾ ಸಮಸ್ಯೆಗಳಿಗೆ, ಗೊಂದಲಕ್ಕೆ ಅರುಣ್ ಸಿಂಗ್ ತೆರೆ ಎಳೆಯಲಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಬೆಂಗಳೂರು/ಚಿಕ್ಕಬಳ್ಳಾಪುರ: ಗಂಡ ಹೆಂಡತಿಯನಡುವೇ ಜಗಳ, ಅಸಮಾಧಾನಗಳಿರುತ್ತದೆ ಅಂಥದ್ದರಲ್ಲಿ ದೊಡ್ಡ ಪಕ್ಷದಲ್ಲಿ ಅಸಮಾಧಾನ ಇರಬಾರದೆನ್ನಲು ಆಗುವುದೆ? ಪಕ್ಷದಲ್ಲಿನ ಎಲ್ಲಾ ಸಮಸ್ಯೆಗಳಿಗೆ, ಗೊಂದಲಕ್ಕೆ ಅರುಣ್ ಸಿಂಗ್ ತೆರೆ ಎಳೆಯಲಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಸಚಿವ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಜೈನ್ ಮಿಷನ್ ಟ್ರಸ್ಟ್ ವತಿಯಿಂದ ಸ್ಥಾಪಿಸಲಾಗಿರುವ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ.

ಮುಂದಿನ ವಾರ ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸುತ್ತಿದ್ದು ಸರ್ಕಾರದಲ್ಲಿ, ಬಿಜೆಪಿ ಶಾಸಕರ ನಡುವಿನ ಗೊಂದಲ, ಭಿನ್ನಾಭಿಪ್ರಾಯಗಳಿಗೆ ಪರಿಹಾರ ನೀಡಲಿದ್ದಾರೆ ಎಂದು ಸುಧಾಕರ್ ಹೇಳಿದರು.

"ಸಾಂಸಾರಿಕ ಜೀವನದಲ್ಲಿ ಗಂಡ ಹೆಂಡತಿಯರ ನಡುವೆಯೇ ಅಸಮಾಧಾನಗಳಿರುತ್ತದೆ. ಅಂಥದ್ದರಲ್ಲಿ ದೊಡ್ಡ ಪಕ್ಷದಲ್ಲಿ ಸಮಾಧಾನಗಳಿರಲ್ಲ ಎಂದು ಭಾವಿಸಿದ್ದೀರಾ? " ಎಂದು ಸುಧಾಕರ್ ಪ್ರಶ್ನಿಸಿದ್ದಾರೆ.

"ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಅನಗತ್ಯ. ಯಡಿಯೂರಪ್ಪ ಅವರೇ ಇನ್ನೂ ಎರಡು ವರ್ಷ ಮುಖ್ಯಮಂತ್ರಿಗಳೆಂದು ಇದಾಗಲೇ ಅರುಣ್ ಸಿಂಗ್ ಕೂಡ ಸ್ಪಷ್ಟಪಡಿಸಿದ್ದಾರೆ," ಅವರು ಹೇಳಿದರು.

ಸಿದ್ದರಾಮಯ್ಯ ಎಲ್ಲಿಂದಲಾದರೂ ಸ್ಪರ್ಧಿಸಲಿ

ಚಾಮರಾಜಪೇಟೆಯಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಬಗ್ಗೆ ಕೇಳಲು ಸಚಿವರು "ನಾನು ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ ವರುಣಾ ಕ್ಷೇತ್ರ ಬಿಡಬೇಡಿ ಎಂದು ಸಿದ್ದರಾಮಯ್ಯ ಅವರಿಗೆ ಹೇಳಿದ್ದೆ. ಆಗ ಕೇಳಿಲ್ಲ, ಈಗವರು ಎಲ್ಲಿಂದಲಾದರೂ ಸ್ಪರ್ಧಿಸಲಿ" ಎಂದರು.

"ರಾಜ್ಯದಲ್ಲಿ ಇದುವರೆಗೆ  1.68 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಲಸಿಕೆ ವಿತರಣೆ ಪಟ್ಟಿಯಲ್ಲಿ ಕರ್ನಾಟಕ  6ನೇ ಸ್ಥಾನದಲ್ಲಿದೆ.  ನಿನ್ನೆ ರಾಜ್ಯಕ್ಕೆ ಮೂರು ಲಕ್ಷ ಡೋಸ್ ಲಸಿಕೆ  ಬಂದಿದೆ. 3 ಕೋಟಿ ಲಸಿಕೆಗೆ ನೀಡಿದ್ದ ಆರ್ಡರ್ ರದ್ದು ಮಾಡುತ್ತೇವೆ, ಲಸಿಕೆ ಕಂಪನಿಗಳಿಗೆ ನೀಡಿದ್ದ ಹಣ ವಾಪಸ್ ಪಡೆಯುತ್ತೇವೆ " ಅವರು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT