ರಾಜಕೀಯ

ಸಿಎಂ ಬಿಎಸ್‌ವೈಗೆ ಸಂಕಷ್ಟ: ವಿರೋಧಿಗಳಿಂದ 'ಗೋ ಬ್ಯಾಕ್, ಸಿಂಗ್' ಅಭಿಯಾನಕ್ಕೆ ಕರೆ?

Raghavendra Adiga

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ. ಆದರೆ ಇದೀಗ ಈ ಕುರಿತಂತೆ ಹೊಸ ಬೆಳವಣಿಗೆ ನಡೆದಿದೆ. ಯಡಿಯೂರಪ್ಪ ಅವರ ವಿರೋಧಿಗಳು ಈಗ ಅರುಣ್ ಸಿಂಗ್ ಅವರ ಮೇಲೆ ತಮ್ಮ ಮುನಿಸನ್ನು ತೋರುತ್ತಿದ್ದಾರೆ.

ಸಿಂಗ್ ಅವರು ಬುಧವಾರ ರಾಜ್ಯಕ್ಕೆ ಆಗಮಿಸಿದಾಗ, ಅವರು ಶಾಸಕರನ್ನು ಭೇಟಿ ಮಾಡುವ ಮೊದಲು ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಸಂವಹನ ನಡೆಸಲಿದ್ದಾರೆ. ಶಾಸಕರಾದ ಬಸನಗೌಡ ಯತ್ನಾಳ್, ಅರವಿಂದ್ ಬೆಲ್ಲದ್ ಮತ್ತು ಜಿ.ಎಚ್. ​​ತಿಪ್ಪಾರೆಡ್ಡಿ ಸಚಿವ ಸಿ.ಪಿ. ಯೋಗೇಶ್ವರ, ಸುನಿಲ್ ಕುಮಾರ್ ಮತ್ತು ಇನ್ನೂ ಕೆಲವರನ್ನೊಳಗೊಂಡ ಒಂದು ಗುಂಪು, ಮೊದಲು ಶಾಸಕಾಂಗ ಪಕ್ಷದ ಸಭೆಗೆ ಸಿಂಗ್ ಕರೆ ನೀಡಬೇಕೆಂದು ಒತ್ತಾಯಿಸಲು ಯೋಜಿಸಿದೆ.

ಮೊದಲು ಸಚಿವರನ್ನು ಭೇಟಿಯಾಗುವುದಾಗಿ ಸಿಂಗ್ ಸೂಚಿಸಿದ್ದರು ಮತ್ತು ಅಗತ್ಯವಿದ್ದರೆ ಶಾಸಕಾಂಗ ಸಭೆ ನಡೆಸಲು ಸಿಂಗ್ ತಯಾರಾಗಿರಬಹುದು. ಆದರೆ ಅಗತ್ಯವಾದರೆ ‘ಗೋ ಬ್ಯಾಕ್, ಅರುಣ್ ಸಿಂಗ್’ ಅಭಿಯಾನವನ್ನು ಪ್ರಾರಂಭಿಸಲು ಸಹ ಸಿಂಗ್ ವಿರೋಧಿ ಬಣ ಸಿದ್ದವಾಗಿದೆ ಎಂಬ ಆತಂಕವಿದೆ.

ಯಡಿಯೂರಪ್ಪ ಅವರು ಇನ್ನೂ ಎರಡು ವರ್ಷಗಳ ಕಾಲ ಸಿಎಂ ಆಗಿ ಉಳಿಯುತ್ತಾರೆ ಎಂದು ಮಾಧ್ಯಮಗಳಿಗೆ ತಿಳಿಸಲು ಸಿಎಂಗೆ ಅಧಿಕಾರ ನೀಡಿದ ಕಾರಣವನ್ನು ಸಿಂಗ್ ಅವರಲ್ಲಿ ಕೇಳಲು ಈ ಗುಂಪು ಬಯಸಿದೆ ಎನ್ನುವುದಾದಲ್ಲಿ ಈ ಭೇಟಿಯ ಉದ್ದೇಶವೇನು ಎನ್ನುವುದು ಈಗಿನ ಪ್ರಶ್ನೆಯಾಗಿ ಉಳಿದಿದೆ.

SCROLL FOR NEXT