ಶಾಸಕ ಅರವಿಂದ್ ಬೆಲ್ಲದ್ 
ರಾಜಕೀಯ

ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ಧಾಲಿಕೆ ಆರೋಪ

ಶಾಸಕ ಅರವಿಂದ್​ ಬೆಲ್ಲದ್​ ಇದೀಗ ಫೋನ್ ಕದ್ಧಾಲಿಕೆಯ ಆರೋಪ ಮಾಡಿದ್ದಾರೆ. ನನ್ನ ಫೋನ್ ಟ್ಯಾಪ್ ಆಗಿದೆ. ನನ್ನನ್ನ ಫಾಲೋ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ.

ಬೆಂಗಳೂರು: ಶಾಸಕ ಅರವಿಂದ್​ ಬೆಲ್ಲದ್​ ಇದೀಗ ಫೋನ್ ಕದ್ಧಾಲಿಕೆಯ ಆರೋಪ ಮಾಡಿದ್ದಾರೆ. ನನ್ನ ಫೋನ್ ಟ್ಯಾಪ್ ಆಗಿದೆ. ನನ್ನನ್ನ ಫಾಲೋ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ.

ಕುಮಾರ ಕೃಪಾ ಗೆಸ್ಟ್​ಹೌಸ್​ ಬಳಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಕಳೆದ ಒಂದು ತಿಂಗಳಿನಿಂದ ನನ್ನ ಫೋನ್​ ಟ್ಯಾಪ್ ಆಗುತ್ತಿದೆ. ನನಗೆ ಅಪರಿಚಿತ ಸಂಖ್ಯೆಯಿಂದ ಕರೆಯೊಂದು ಬಂದಿತ್ತು. ಯಾರೆಂದು ಕೇಳಿದಾಗ ಯುವರಾಜ ಸ್ವಾಮಿ ಎಂದು ಹೇಳಿಕೊಂಡರು. ನನಗೇಕೋ ಈ ಕರೆ ಸರಿ ಎನಿಸದ ಕಾರಣ ನಾನು ಕರೆಯನ್ನ ಕಟ್​ ಮಾಡಿದೆ.

ಆದರೆ ಈ ಘಟನೆ ನಡೆದು ಮೂರ್ನಾಲ್ಕು ದಿನಗಳ ಬಳಿಕ ನನ್ನ ಮೊಬೈಲ್ ​ಗೆ ಮತ್ತೊಮ್ಮೆ ಕರೆ ಬಂದಿತ್ತು. ಆಗಲೂ ಸಹ ತಾನು ಯುವರಾಜ ಸ್ವಾಮಿ ಎಂದು ಹೇಳಿಕೊಂಡ ವ್ಯಕ್ತಿ, ನನ್ನನ್ನ ಅನವಶ್ಯಕವಾಗಿ ಜೈಲಿಗೆ ಹಾಕಿದ್ದಾರೆ. ನನಗೆ ಸಹಾಯ ಮಾಡಿ ಎಂದಿದ್ದರು.

ಆದರೆ ಈ  ಕರೆಯ ಹಿಂದೆ ನನ್ನ ವಿರುದ್ಧ ದೊಡ್ಡ ಪಿತೂರಿಯೇ ಇದೆ. ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದೇನೆ. ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇನೆ ಎಂದು ಶಾಸಕ ಅರವಿಂದ್ ಬೆಲ್ಲದ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT