ಬಸವ ಜಯ ಮೃತ್ಯುಂಜಯ ಸ್ವಾಮಿ 
ರಾಜಕೀಯ

ಲಿಂಗಾಯತ ಸಮುದಾಯದಲ್ಲಿ ಯಡಿಯೂರಪ್ಪ ಸ್ಥಾನಕ್ಕೆ ಬದಲಿಯಾಗಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ: ಜಯಮೃತ್ಯುಂಜಯ ಸ್ವಾಮೀಜಿ

ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಮೂರನೇ ದಿನದ ಸಭೆ ಮುಂದುವರಿಯುತ್ತಿದ್ದಂತೆ ರಾಜ್ಯದಲ್ಲಿ ಸಿಎಂ ನಾಯಕತ್ವ ಬದಲಾವಣೆ ಚರ್ಚೆ ಶುಕ್ರವಾರ ಕೂಡ ಜೋರಾಗಿದೆ. 

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಮೂರನೇ ದಿನದ ಸಭೆ ಮುಂದುವರಿಯುತ್ತಿದ್ದಂತೆ ರಾಜ್ಯದಲ್ಲಿ ಸಿಎಂ ನಾಯಕತ್ವ ಬದಲಾವಣೆ ಚರ್ಚೆ ಶುಕ್ರವಾರ ಕೂಡ ಜೋರಾಗಿದೆ. 

ಬಿ ಎಸ್ ಯಡಿಯೂರಪ್ಪನವರ ಪರ-ವಿರೋಧ ಬಣದ ವಾಗ್ದಾಳಿ, ಭಿನ್ನಮತ ಮತ್ತಷ್ಟು ಹೆಚ್ಚಾಗಿದ್ದೆ, ಇವೆಲ್ಲದರ ನಡುವೆ ಅರುಣ್ ಸಿಂಗ್ ಅವರ ಲೆಕ್ಕಾಚಾರವೇನು, ಅವರು ಹೈಕಮಾಂಡ್ ಗೆ ಯಾವ ವಿಷಯಗಳನ್ನು ತಿಳಿಸಲಿದ್ದಾರೆ, ಹೈಕಮಾಂಡ್ ಗೆ ಸೇತುವೆಯಾಗಿ ಅರುಣ್ ಸಿಂಗ್ ಅವರು ಯಾವ ರೀತಿ ಕೆಲಸ ಮಾಡಲಿದ್ದಾರೆ ಎಂಬುದು ಕುತೂಹಲ.

ಈ ಮಧ್ಯೆ ಇಂದು ಮತ್ತೆ ಹೇಳಿಕೆ ನೀಡಿರುವ ಲಿಂಗಾಯತ ಸಮುದಾಯದ ಬಸವ ಜಯಮೃತ್ಯುಂಜಯ ಸ್ವಾಮಿ, ನಾವು ಸಿಎಂ ಬದಲಾವಣೆ ಮಾಡಬೇಕೆಂದು ಒತ್ತಡ ಹೇರಲು ಸಾಧ್ಯವಿಲ್ಲ, ಸಿಎಂ ಬದಲಾವಣೆ ಮಾಡುವ ಅಧಿಕಾರ ನಮಗಿಲ್ಲ, ನಾವು ಕೇಂದ್ರದ ಬಿಜೆಪಿ ನಾಯಕರಿಗೆ ಸಲಹೆ ಕೊಡಬಹುದಷ್ಟೆ ಎಂದಿದ್ದಾರೆ.

ಯಡಿಯೂರಪ್ಪನವರ ಬದಲಿಗೆ ನಾಯಕರಿಲ್ಲ ಎಂದು ಬಿಂಬಿಸುವುದು ಬೇಡ, ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿ ಪ್ರಬಲ ಲಿಂಗಾಯತ ನಾಯಕರು ತುಂಬಿ ತುಳುಕುತ್ತಿದ್ದಾರೆ. ಸಿಎಂ ಬದಲಾವಣೆ ಮಾಡುವುದಿದ್ದರೆ ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದವರಿಗೇ ಪ್ರಾತಿನಿಧ್ಯ ನೀಡಲಿ, ನಾನು ಲಿಂಗಾಯತ ಸಮುದಾಯದ ಪ್ರಾತಿನಿಧ್ಯ ವಹಿಸುತ್ತಿರುವುದರಿಂದ, ನಮ್ಮ ಸಮುದಾಯದವರಿಗೆ ಪ್ರಾತಿನಿಧ್ಯ ಸಿಗಲಿ ಎಂದು ಹೀಗೆ ಹೇಳುತ್ತಿದ್ದೇನೆ, ಅದು ಬಿಟ್ಟರೆ ನಾನು ಸಿಎಂ ಬದಲಾವಣೆಗೆ ಒತ್ತಾಯ ಮಾಡುವುದಿಲ್ಲ, ಅವರಿಗೆ ಸಲಹೆ ಮಾತ್ರ ನೀಡಬಹುದು ಎಂದರು.

ಇಂದು ಪಕ್ಷದ ಸಂಘಟನೆ ಬಗ್ಗೆ ವಿವಿಧ ಮೋರ್ಚಾ ಅಧ್ಯಕ್ಷರ ಜೊತೆಗೆ ಅರುಣ್ ಸಿಂಗ್ ಚರ್ಚೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT