ಸಿಎಂ ಯಡಿಯೂರಪ್ಪ(ಸಂಗ್ರಹ ಚಿತ್ರ) 
ರಾಜಕೀಯ

ರಾಜ್ಯದಲ್ಲಿ ರಾಜಕೀಯ ಗೊಂದಲವಿಲ್ಲ, ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ; ನನ್ನ ಪುತ್ರನ ವಿರುದ್ಧದ ಆರೋಪ ಆಧಾರರಹಿತ: ಬಿ ಎಸ್ ಯಡಿಯೂರಪ್ಪ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ವಿಧಾನಸೌಧದ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರೋ ಒಂದಿಬ್ಬರು ವಿರೋಧ ಮಾತನಾಡಬಹುದು, ಅಂತವರು ತಮ್ಮ ಸಮಸ್ಯೆಗಳನ್ನು ಬಂದು ಮಾತನಾಡಿ ಬಗೆಹರಿಸಿಕೊಳ್ಳಲಿ, ನಾಯಕರ ಮಧ್ಯೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೆಚ್ ವಿಶ್ವನಾಥ್ ಆರೋಪಗಳ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ, ಅವರ ಬಗ್ಗೆ ಹೈಕಮಾಂಡ್ ತೀರ್ಮಾನಿಸಿ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಹಳ್ಳಿಹಕ್ಕಿ ಆರೋಪದ ಬಗ್ಗೆ ಮುಖ್ಯಮಂತ್ರಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ರಾಜಕೀಯ ಗೊಂದಲವೇ ಇಲ್ಲ, ಯಾರೋ ಒಂದಿಬ್ಬರು ಮಾಧ್ಯಮಗಳ ಮುಂದೆ ನೀಡುವ ಹೇಳಿಕೆಗಳನ್ನು ನೀವು ಹೈಲೈಟ್ ಮಾಡುತ್ತೀರಿ, ಪಕ್ಷದ ವಿರುದ್ಧ ಮಾತನಾಡುವವರಿಗೆ ನಿನ್ನೆ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ ಎಂದರು.

ವಿಜಯೇಂದ್ರ ವಿರುದ್ಧದ ಕಿಕ್ ಬ್ಯಾಗ್ ಆರೋಪ ಕೂಡ ಆಧಾರರಹಿತ, ನೀರಾವರಿ ಇಲಾಖೆಯಲ್ಲಿನ ಟೆಂಡರ್ ಆರೋಪದ ಬಗ್ಗೆ ಇಲಾಖೆಯ ಅಧಿಕಾರಿಗಳು ಸ್ಪಷ್ಟನೆ ನೀಡುತ್ತಾರೆ ಎಂದರು.

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ಕಡಿಮೆಯಾಗುತ್ತಿದೆ. ಜೂನ್ 21ರ ನಂತರ ಯಾವ್ಯಾವುದಕ್ಕೆ ರಿಯಾಯಿತಿ ನೀಡಬೇಕು, ಯಾವ ಚಟುವಟಿಕೆಗಳನ್ನು ಆರಂಭಿಸಬೇಕು ಎಂಬ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ನಾಳೆ ಸಂಜೆಯೊಳಗೆ ತೀರ್ಮಾನಿಸಲಾಗುವುದು ಎಂದರು.

ಉತ್ತಮ ಮುಂಗಾರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಉತ್ತಮ ಮಳೆಯಾಗುತ್ತಿದೆ. ರೈತರ ಬೀಜ ಬಿತ್ತನೆ ಕಾರ್ಯ ಆರಂಭವಾಗಿದೆ. ರೈತರಿಗೆ ಬೀಜ, ರಸಗೊಬ್ಬರ ನೀಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸುತ್ತೇವೆ. ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾದರೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇವೆ ಎಂದರು.

ಅರವಿಂದ್ ಬೆಲ್ಲದ್ ಅವರು ನಿನ್ನೆ ಡಿಜಿಯವರಿಗೆ ಫೋನ್ ಕದ್ದಾಲಿಕೆ ಬಗ್ಗೆ ದೂರು ನೀಡಿದ್ದಾರೆ. ನಂತರ ಅವರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿ ತನಿಖೆ ನಡೆಸುವಂತೆ ಹೇಳಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ