ಡಿ.ಕೆ ಶಿವಕುಮಾರ್ 
ರಾಜಕೀಯ

ಬೇರೆ ಪಕ್ಷದಿಂದ ಬಂದು ವ್ಯಕ್ತಿ ಪೂಜೆ, ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ: ಡಿಕೆಶಿ

ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ. ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹಾಸನ: ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ. ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ತತ್ವ, ಸಿದ್ಧಾಂತ ಮತ್ತು ನಾಯಕತ್ವ ಒಪ್ಪಿಕೊಂಡು ಬರುವವರಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ಇದಕ್ಕಾಗಿ ಪಕ್ಷ ಸೇರಲು ಬಯಸುವವರ ಪಟ್ಟಿಯನ್ನು ಸ್ಥಳೀಯ ಸಮಿತಿಗಳ ಮುಂದೆ ಇಟ್ಟು, ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು’ ಎಂದು ಪರೋಕ್ಷವಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ವ್ಯಕ್ತಿ ಪೂಜೆ, ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡ. ಪಕ್ಷ ಪೂಜೆ ಮಾಡುವ, ಪಕ್ಷದ ಸಿದ್ಧಾಂತ ಮತ್ತು ನಾಯಕತ್ವ ನಂಬಿ ಬರುವವರಿಗೆ ಮಾತ್ರ ಪ್ರವೇಶವಿದೆ’ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಸಿದ್ದರಾಮಯ್ಯ ಮುಂದಿನ  ಮುಖ್ಯಮಂತ್ರಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಡಿಕೆ ಶಿವಕುಮಾರ್ ಪರೋಕ್ಷವಾಗಿ ಜಮೀರ್ ಅಹ್ಮದ್ ಗೆ ಮಾತಿನಲ್ಲಿ ತಿವಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಶಿವಮೊಗ್ಗ: ನಡು ರಸ್ತೆಯಲ್ಲೇ ಕಬ್ಬಿಣದ ರಾಡ್ ನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, Video ವೈರಲ್ ಬಳಿಕ ಆರೋಪಿ ಬಂಧನ!

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!