ಡಿ.ಕೆ ಶಿವಕುಮಾರ್ 
ರಾಜಕೀಯ

ಬೇರೆ ಪಕ್ಷದಿಂದ ಬಂದು ವ್ಯಕ್ತಿ ಪೂಜೆ, ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ: ಡಿಕೆಶಿ

ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ. ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹಾಸನ: ಬೇರೆ ಪಕ್ಷದಿಂದ ಬಂದು ಗುಂಪುಗಾರಿಕೆ ಮಾಡಿ, ಕಾಂಗ್ರೆಸ್‌ಗೆ ಹಾನಿ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ. ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ತತ್ವ, ಸಿದ್ಧಾಂತ ಮತ್ತು ನಾಯಕತ್ವ ಒಪ್ಪಿಕೊಂಡು ಬರುವವರಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ಇದಕ್ಕಾಗಿ ಪಕ್ಷ ಸೇರಲು ಬಯಸುವವರ ಪಟ್ಟಿಯನ್ನು ಸ್ಥಳೀಯ ಸಮಿತಿಗಳ ಮುಂದೆ ಇಟ್ಟು, ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು’ ಎಂದು ಪರೋಕ್ಷವಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ವ್ಯಕ್ತಿ ಪೂಜೆ, ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡ. ಪಕ್ಷ ಪೂಜೆ ಮಾಡುವ, ಪಕ್ಷದ ಸಿದ್ಧಾಂತ ಮತ್ತು ನಾಯಕತ್ವ ನಂಬಿ ಬರುವವರಿಗೆ ಮಾತ್ರ ಪ್ರವೇಶವಿದೆ’ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಸಿದ್ದರಾಮಯ್ಯ ಮುಂದಿನ  ಮುಖ್ಯಮಂತ್ರಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಡಿಕೆ ಶಿವಕುಮಾರ್ ಪರೋಕ್ಷವಾಗಿ ಜಮೀರ್ ಅಹ್ಮದ್ ಗೆ ಮಾತಿನಲ್ಲಿ ತಿವಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT