ಡಿಕೆ.ಶಿವಕುಮಾರ್ 
ರಾಜಕೀಯ

ಚಾಮರಾಜನಗರ ದುರಂತ: ಮೃತರ ಮನೆಗೆ ಇಂದು ಡಿಕೆ.ಶಿವಕುಮಾರ್ ಭೇಟಿ

ಚಾಮರಾಜನಗರದಲ್ಲಿ ಆಮ್ಲಜನಕ ಇಲ್ಲದೆ, ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ.

ಬೆಂಗಳೂರು: ಚಾಮರಾಜನಗರದಲ್ಲಿ ಆಮ್ಲಜನಕ ಇಲ್ಲದೆ, ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ. 

ಬೆಳಿಗ್ಗೆ 8.30ರಿಂದ ರಾತ್ರಿ 8.45ರವರೆಗೆ ಎಲ್ಲಾ ಮೃತರ ಕುಟುಂಬಗಳನ್ನು ಭೇಟಿ ಮಾಡಲು ಪಾಳ್ಯ, ಕೊಳ್ಳೇಗಾಲ, ಚೆನ್ನಪ್ಪನಪುರ ದೊಡ್ಡಿ, ಹನೂರು, ತಿಮ್ಮರಾಜೀಪುರ, ಮುಡಿಗುಂಡ, ಯರಿಯೂರು, ಕಸ್ತೂರು, ಯರಗಂಬಳ್ಳಿ, ಬಾಣಹಳ್ಳಿ, ಆಲ್ದೂರು, ಮಂಗಲದ ಹೊಸೂರು, ಚಾಮರಾಜನಗರ ಟೌನ್, ಜ್ಯೋತಿಗೌಡನಪುರ, ನಲ್ಲೂರು, ನಾಗವಳ್ಳಿ, ಚಂದಕಮವಾಡಿ, ವೀರಯ್ಯನಪುರ, ಬಿಸಲವಾಡಿ, ಬಂಡಿಗೆರೆ, ಹೊನ್ನಹಳ್ಳಿ, ನಂಜೇದೇವನಪುರ, ದೇಸಿಗೌಡನಪುರ, ಲಕ್ಕೂರು, ಯರಿಯೂರು, ಶಿಂಡುನಪುರ, ಗುಂಡ್ಲುಪೇಟೆ ಟೌನ್, ಗುಂಡ್ಲುಪೇಟೆ ಹೊಸೂರು, ಹೆಂಗಳಪುರಕ್ಕೆ ಭೇಟಿ ನೀಡಲಿದ್ದಾರೆ. 

ಇದೇ ವೇಳೆ ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಆರ್.ಧ್ರುವನಾರಾಯಣ ಅವರೂ ಕೂಡ ಡಿಕೆ.ಶಿವಕುಮಾರ್ ಅವರ ಜೊತೆಗೆ ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ. ಪ್ರಕರಣ ಸಂಬಂಧ ಕಾನೂನು ಹೋರಾಟ ಮಾಡುತ್ತಿರುವ ಕುಟುಂಬಗಳಿಗೆ ಪಕ್ಷ ಸಹಾಯ ಮಾಡಲಿದೆ ಎಂದು ಧ್ರುವನಾರಾಯಣ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ವಿರುದ್ಧ ಯುದ್ಧ ಮಾಡಿದರೆ ಸೋಲು ಖಚಿತ: ಪಾಕಿಸ್ತಾನಕ್ಕೆ ಮಾಜಿ CIA ಅಧಿಕಾರಿ ಎಚ್ಚರಿಕೆ

Maharashtra: ಮಹಿಳಾ ಡಾಕ್ಟರ್ ಆತ್ಮಹತ್ಯೆ ಪ್ರಕರಣ, ಓರ್ವನ ಬಂಧನ; ಪ್ರಮುಖ ಆರೋಪಿಗಾಗಿ ಪೊಲೀಸರ ಶೋಧ!

Kurnool Bus Fire- ಬಸ್ಸಿನ ಸೀಟುಗಳನ್ನು ಅಕ್ರಮವಾಗಿ ಸ್ಲೀಪರ್ ಕೋಚ್ ಆಗಿ ಮಾರ್ಪಡಿಸಲಾಗಿತ್ತು: ದಾಖಲೆಗಳಿಂದ ಬಹಿರಂಗ

ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೃಷ್ಣ ಭೈರೇಗೌಡ ಅಚ್ಚರಿ ಹೇಳಿಕೆ !

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಚರ್ಚೆ ನಡುವಲ್ಲೇ ನವೆಂಬರ್‌ನಲ್ಲಿ ರಾಹುಲ್ ಗಾಂಧಿ ಬೆಂಗಳೂರಿಗೆ..?

SCROLL FOR NEXT