ಕುಮಾರಸ್ವಾಮಿ 
ರಾಜಕೀಯ

60 ವರ್ಷ ರಾಜ್ಯ ಆಳಿದ ಪಕ್ಷ ದಲಿತರನ್ನು ಸಿಎಂ ಮಾಡಿಲ್ಲವೇಕೆ: ಕಾಂಗ್ರೆಸ್ ಗೆ ಕುಮಾರಸ್ವಾಮಿ ಟಾಂಗ್

‘ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ಮುಖಂಡರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರಶ್ನಿಸಿದರು.

ಮಂಡ್ಯ: ‘ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ಮುಖಂಡರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರಶ್ನಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ದಲಿತರು ಮುಖ್ಯಮಂತ್ರಿಯಾಗುವುದನ್ನು ನಾವು ತಪ್ಪಿಸಿಲ್ಲ. ಅವಕಾಶ ತಪ್ಪಿಸಿದ್ದವರೇ ಈಗ ಮತ್ತೆ ಸಿ.ಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. ತಾನಿದ್ದರೆ ಮಾತ್ರ ಕಾಂಗ್ರೆಸ್‌ ಎಂದೂ ಹೇಳಿಕೊಳ್ಳುತ್ತಾರೆ. 130 ಸೀಟ್‌ನಿಂದ 78ಕ್ಕೆ ಇಳಿಸಿದರಲ್ಲ ಅವರೇ ದಲಿತರಿಗೆ ಸಿ.ಎಂ ಆಗುವ ಅವಕಾಶ ತಪ್ಪಿಸಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಅವಕಾಶ ಸಿಕ್ಕಾಗಲೇ ಕಾಂಗ್ರೆಸ್ ದಲಿತರನ್ನ ಸಿಎಂ ಮಾಡಲಿಲ್ಲ.  2008ರಲ್ಲಿ ನಾನೇ ಮಲ್ಲಿಕಾರ್ಜುನ  ಖರ್ಗೆಗೆ ಮನವಿ ಮಾಡಿದ್ದೆ. ಬೇಷರತ್ ಬೆಂಬಲ ಕೊಡುತ್ತೇವೆ ಎಂದರೂ ಮಾಡಿರಲಿಲ್ಲ. ಕಾಂಗ್ರೆಸ್ ನಲ್ಲಿ ವಲಸಿಗರು ಮೂಲ ಕಾಂಗ್ರೆಸ್ ಎಂದು ಚರ್ಚೆ ನಡೆಯುತ್ತಿದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT