ಮತ ಎಣಿಕೆ ಕೇಂದ್ರದಿಂದ ಹೊರಬಂದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ 
ರಾಜಕೀಯ

ಮಸ್ಕಿಯಲ್ಲಿ ಆಪರೇಷನ್ ಫೇಲ್: ಪ್ರತಾಪ್ ಗೌಡ ಪಾಟೀಲ್ ಗೆ ಮುಖಭಂಗ; ಗೆಲುವಿನತ್ತ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ

ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಮುಖಭಂಗವಾಗುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ ಗೆಲುವು ಬಹುತೇಕ ನಿಶ್ಚಯವಾಗಿದೆ.

ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಮುಖಭಂಗವಾಗುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಗೆಲುವು ಬಹುತೇಕ ನಿಶ್ಚಯವಾಗಿದೆ. ಇಷ್ಟು ಹೊತ್ತು ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಇದೀಗ ತಮ್ಮ ಸೋಲು ಖಚಿತ ಎಂದು ಗೊತ್ತಾಗುತ್ತಿದ್ದಂತೆ ಹೊರ ನಡೆದಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಇಷ್ಟೊಂದು ಅಭಿವೃದ್ಧಿ ಕೆಲಸಗಳನ್ನು ತಾವು ಮಾಡಿದ್ದರೂ ಜನರು ಬೆಲೆ ಕೊಟ್ಟಿಲ್ಲ, ನಿರೀಕ್ಷಿತ ಮತಗಟ್ಟೆಗಳಲ್ಲಿಯೂ ತಮ್ಮ ಪರ ಮತಗಳು ಬಂದಿಲ್ಲ, ಜನ ಹೀಗೆ ಯಾಕೆ ಮಾಡಿದ್ದಾರೆ ಎಂದು ಗೊತ್ತಾಗುತ್ತಿಲ್ಲ, ಕ್ಷೇತ್ರದಲ್ಲಿ ವಿರೋಧಿ ಅಲೆ ಎದ್ದಿರುವುದು ಗೊತ್ತಾಗುತ್ತಿದೆ ಎಂದು ಬೇಸರದಿಂದಲೇ ಹೇಳಿದರು.

ಹೊಸಬರೊಂದಿಗೆ ಒಡನಾಟ ಬೇಕು ಎಂದು ಕ್ಷೇತ್ರದ ಜನ ಭಾವಿಸಿದ್ದಾರೆ ಎನಿಸುತ್ತದೆ, ಕ್ಷೇತ್ರದ ಜನಕ್ಕೆ ಅಭಿವೃದ್ಧಿ, ಪ್ರೀತಿ-ವಿಶ್ವಾಸ ಬೇಕಾಗಿಲ್ಲ ಎಂದು ನನಗೆ ಇಂದು ಉಂಟಾದ ಸೋಲಿನಿಂದ ಕಂಡುಬರುತ್ತಿದೆ. ಹೊಸಬರಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ ಎನಿಸುತ್ತಿದೆ, ಯಾರು ಬಂದು ಪ್ರಚಾರ ಮಾಡಿದರೂ ಪರಿಣಾಮ ಬೀರುವುದಿಲ್ಲ ಎಂದರು. 

ನಮ್ಮವರೇ ನನಗೆ ಕೈಕೊಟ್ಟರು: ನನ್ನ ಇಂದಿನ ಸೋಲಿಗೆ ನಮ್ಮವರೇ ನನ್ನ ವಿರುದ್ಧ ಕೆಲಸ ಮಾಡಿರುವುದು ಕೂಡ ಪ್ರಮುಖ ಕಾರಣವಾಗಿದೆ. ಅದು ಯಾರು ಎಂದು ಪಕ್ಷದ ಹಿರಿಯ ನಾಯಕರು ಕಂಡುಹಿಡಿಯಬೇಕು ಎಂದರು. 

ಮುಂದಿನ ದಿನಗಳಲ್ಲಿ ಪಕ್ಷದ ಹಿರಿಯರ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಸೋಲಿಗೆ ಏನು ಕಾರಣ ಎಂದು ಪಕ್ಷದ ಹಿರಿಯ ನಾಯಕರು ತೀರ್ಮಾನಿಸುತ್ತಾರೆ, ಸೋತೆನೆಂದು ಕ್ಷೇತ್ರ, ಪಕ್ಷ ಬಿಟ್ಟು ಹೋಗುವುದಿಲ್ಲ, ಮುಂದೆಯೂ ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡುತ್ತೇನೆ, ಇನ್ನೂ ಎರಡು ವರ್ಷಗಳ ಕಾಲ ನಮ್ಮ ಪಕ್ಷ ಅಧಿಕಾರದಲ್ಲಿ ಇರುತ್ತದೆ, ಈ ಸಮಯದಲ್ಲಿ ನನ್ನಿಂದ ಏನು ಈ ಕ್ಷೇತ್ರಕ್ಕೆ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇನೆ ಎಂದರು. 

ಇತ್ತೀಚಿನ ವರದಿ ಬಂದಾಗ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ 8 ಸಾವಿರದ 618 ಮತಗಳ ಅಂತರದಿಂದ 8ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಂದ ಮುನ್ನಡೆಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT