ಶರಣು ಸಲಗರ 
ರಾಜಕೀಯ

ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ

ಬೀದರ್ ಜಿಲ್ಲೆಯ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 20 ಸಾವಿರದ 904 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಸವಕಲ್ಯಾಣ: ಬೀದರ್ ಜಿಲ್ಲೆಯ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 20 ಸಾವಿರದ 904 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ವಿಧಾನಸಭೆಗೆ ಶರಣು ಸಲಗರ ಮೊದಲ ಬಾರಿಗೆ ಪ್ರವೇಶಿಸುತ್ತಿದ್ದಾರೆ. ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಮಾಲಾ ಬಿ ನಾರಾಯಣರಾವ್ ಅವರ ಎದುರು ಗೆಲುವು ಸಾಧಿಸಿದ್ದಾರೆ.

ತಮ್ಮ ಗೆಲುವನ್ನು ಕ್ಷೇತ್ರದ ಮತದಾರರು ಮತ್ತು ಪಕ್ಷಕ್ಕೆ ಅರ್ಪಿಸಿದ ಶರಣು ಸಲಗರ, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು. 

ಬಸವಕಲ್ಯಾಣ ಕ್ಷೇತ್ರದಲ್ಲಿ ಗೆದ್ದ ಪಕ್ಷದ ಅಭ್ಯರ್ಥಿ ಶರಣು ಸಲಗರ ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಕ್ಷೇತ್ರದ ಮತದಾರರಿಗೆ ಧನ್ಯವಾದಗಳು, ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಕಂಡ ನಮ್ಮ ಅಭ್ಯರ್ಥಿ ಮತ್ತು ಅವರ ಗೆಲುವಿಗಾಗಿ ದುಡಿದ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಶರಣು ಸಲಗಾರ್ ಅವರು ಆರಂಭದಿಂದಲೂ ಮತ ಎಣಿಕೆ ವೇಳೆ ಮುನ್ನಡೆ ಸಾಧಿಸುತ್ತಲೇ ಬಂದು ಕೊನೆಯ 16ನೇ ಸುತ್ತಿನವರೆಗೂ ಮುನ್ನಡೆ ಕಾಯ್ದುಕೊಂಡಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT