ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ನಿಶ್ಚಯವಾಗುತ್ತಿದ್ದಂತೆ ಜನಾದೇಶಕ್ಕೆ ತಲೆಬಾಗುತ್ತೇವೆ ಎಂದು ಕ್ಷೇತ್ರದಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಚುನಾವಣೆಯಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ, ಇಂದಿನ ಸೋಲಿನಿಂದ ಮಸ್ಕಿ ಬಿಜೆಪಿ ಕಾರ್ಯಕರ್ತರು ಎದೆಗುಂದುವುದು ಬೇಡ, ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತನಾಗಿ ಸದಾ ನಿಮ್ಮ ಜೊತೆಗಿದ್ದು ಮುಂದಿನ ದಿನಗಳಲ್ಲಿ ಪಕ್ಷದ, ಕ್ಷೇತ್ರದ ಒಳಿತಿಗೆ ಕೆಲಸ ಮಾಡೋಣ ಎಂದು ವಿಜಯೇಂದ್ರ ಕಾರ್ಯಕರ್ತರಿಗೆ ಹೇಳಿದ್ದಾರೆ.