ಡಿ ಕೆ ಶಿವಕುಮಾರ್ 
ರಾಜಕೀಯ

ಇದು ಸಂಭ್ರಮಾಚರಣೆ ಮಾಡುವ ಸಮಯವಲ್ಲ, ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕರಿಸೋಣ: ಡಿ ಕೆ ಶಿವಕುಮಾರ್

ಮಸ್ಕಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಂದು ಚುನಾವಣಾ ಫಲಿತಾಂಶ ಪ್ರಕಟವಾಗಿ ಗೆದ್ದ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಂದು ಚುನಾವಣಾ ಫಲಿತಾಂಶ ಪ್ರಕಟವಾಗಿ ಗೆದ್ದ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕಿನಿಂದ ನಿತ್ಯವೂ ಅಪಾರ ಸಾವು-ನೋವು ಉಂಟಾಗುತ್ತಿದೆ, ಜನರು ಬಹಳ ಸಂಕಷ್ಟದಲ್ಲಿದ್ದಾರೆ, ಹೀಗಿರುವಾಗ ಇದು ಸಂಭ್ರಮಪಡುವ ಸಮಯವಲ್ಲ, ಗುಂಪು ಸೇರಿ, ಪಟಾಕಿ ಹಚ್ಚಿ ಸಿಹಿ ತಿಂದು ಸಂಭ್ರಮಾಚರಣೆ ಮಾಡಬೇಡಿ, ಚುನಾವಣಾ ಆಯೋಗ ಕೂಡ ಸ್ಪಷ್ಟವಾಗಿ ಸಂಭ್ರಮಾಚರಣೆ ಮಾಡಬಾರದೆಂದು ಹೇಳಿದೆ, ಯಾರೂ ನಿಯಮ ಉಲ್ಲಂಘಿಸಬೇಡಿ ಎಂದು ಮನವಿ ಮಾಡಿಕೊಂಡರು.

ಮಸ್ಕಿ ಮತ್ತು ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸದಲ್ಲಿದ್ದೇವೆ, ಈ ಚುನಾವಣಾ ಫಲಿತಾಂಶ ಎಲ್ಲ ಪಕ್ಷಕ್ಕೂ ಆತ್ಮಾವಲೋಕನ ಮಾಡಿಕೊಳ್ಳುವ ಸಂದರ್ಭ ಎಂದು ಡಿ ಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT