ಮಂಗಳಾ ಅಂಗಡಿ 
ರಾಜಕೀಯ

ಬೆಳಗಾವಿ ಲೋಕಸಭೆ ಉಪಚುನಾವಣೆ: ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿಗೆ ಗೆಲುವು

ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನಲೆ ಇಂದು ನಡೆದ ಮತ ಎಣಿಕೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನಲೆ ಇಂದು ನಡೆದ ಮತ ಎಣಿಕೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಲೋಕಸಭೆಗೆ ಉಪಚುನಾವಣೆ ನಡೆದಿತ್ತು. ಬಿಜೆಪಿ ತನ್ನ ಅಭ್ಯರ್ಥಿಯಾಗಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಅವರನ್ನು ಕಣಕ್ಕಿಳಿಸಿತ್ತು. ಇನ್ನು ಕಾಂಗ್ರೆಸ್ ಸಹ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಿತ್ತು. 

ಇಬ್ಬರ ನಡುವೆ ನಡೆದ ತೀವ್ರ ಹಣಾಹಣಿಯಲ್ಲಿ ಸತೀಶ್ ಜಾರಕಿಹೊಳಿ ಅವರು ಕೊನೆಯ 7 ಸುತ್ತುಗಳ ಮತ ಎಣಿಕೆಯೊರೆಗೂ ಮುನ್ನಡೆ ಸಾಧಿಸಿದ್ದರು. ಆದರೆ ನಂತರ ಮಂಗಳಾ ಅಂಗಡಿ ಅವರು ಮುನ್ನಡೆ ಸಾಧಿಸುವ ಮೂಲಕ ಗೆಲುವ ದಾಖಲಿಸಿದ್ದಾರೆ. 

ಮಂಗಳಾ ಅಂಗಡಿಯವರು ಬರೋಬ್ಬರಿ 4,35,202 ಮತಗಳನ್ನು ಪಡೆದಿದ್ದರೆ ಸತೀಶ್ ಜಾರಕಿಹೊಳಿ ಅವರು 4,32,299 ಮತಗಳನ್ನು ಪಡೆದಿದ್ದು 5240 ಮತಗಳ ಅಂತರದಿಂದ ಮಂಗಳಾ ಅಂಗಡಿ ಅವರು ಗೆಲುವು ಸಾಧಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT