ಯಡಿಯೂರಪ್ಪ ಮತ್ತು ಸುಧಾಕರ್ 
ರಾಜಕೀಯ

'ಸುಧಾಕರ್ ಸ್ಥಿತಿ ದ್ರೌಪದಿ ವಸ್ತ್ರಾಪಹರಣ ಮಾಡಿದಂತೆ ಆಗಿದೆ: ಸಿಎಂಗೆ ಕಣ್ಣು ಕಾಣಲ್ಲ ಕಿವಿಯೂ ಕೇಳಲ್ಲ'

ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಸ್ಥಿತಿ ದ್ರೌಪದಿ ವಸ್ತ್ರಾಪಹರಣ ಮಾಡಿದಂತೆ ಆಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ. 

ಮೈಸೂರು: ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಸ್ಥಿತಿ ದ್ರೌಪದಿ ವಸ್ತ್ರಾಪಹರಣ ಮಾಡಿದಂತೆ ಆಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ. 

ಮೈಸೂರಿನಲ್ಲಿ ಬುಧವಾರ ಮಾತನಾಡಿದ ಅವರು, ಕೊರೊನಾ ನಿರ್ವಹಣೆಗೆ ಸಚಿವರ ನೇಮಕ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು ಆರೋಗ್ಯ ಸಚಿವರ ಎಲ್ಲ‌ ಅಧಿಕಾರ ಕಿತ್ತು ಜಗದೀಶ್ ಶೆಟ್ಟರ್‌, ಆರ್‌ ಅಶೋಕ್ ಹಾಗೂ ಅಶ್ವತ್ಥ ನಾರಾಯಣ ಅವರಿಗೆ ಕೊಟ್ಟಿದ್ದಾರೆ ಎಂದು ಕುಹಕವಾಡಿದ್ದಾರೆ.

ಆ‌ ಸುಧಾಕರ್ ಪಾಪ. ನೀನು ಏನು ಅಂದ್ರೆ? ಹೆಲ್ತ್ ಮಿನಿಸ್ಟರ್ ಎನ್ನಬೇಕು ಅಷ್ಟೇ. ಆತನ ಬಳಿ ಬೇರೆ ಏನು ಅಧಿಕಾರ ಇಲ್ಲ. ಇದು ಕಮಿಟಿ ಮಾಡುವ ಸಮಯವಲ್ಲ. ಹಿಂದೆಯೇ ಇದನ್ನು ಮಾಡಿದ್ದರೆ ಅನುಕೂಲವಾಗುತಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನೂ ಸಿಎಂ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ ಎಚ್. ವಿಶ್ವನಾಥ್ ಮುಖ್ಯಮಂತ್ರಿಗಳಿಗೆ ಕಣ್ಣು ಕಾಣಲ್ಲ ಕಿವಿಯೂ ಕೇಳಲ್ಲ. ಹೇಳಿದ್ದು ಅರ್ಥ ಆಗಲ್ಲ ಇಂತವರನ್ನು ಕಟ್ಟಿಕೊಂಡು ಏನು ಮಾಡಲು ಸಾಧ್ಯ? ಸಿಎಂ ಬಳಿ ಹೋದ ಖಾತೆಗಳು ಸತ್ತು ಹೋಗುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT