ಡಿಕೆ.ಶಿವಕುಮಾರ್ 
ರಾಜಕೀಯ

ಲಾಕ್‌ಡೌನ್‌ ಅವಧಿಯಲ್ಲಿ ಬಡವರಿಗೆ ಹಣಕಾಸು ನೆರವಿನ ಪ್ಯಾಕೇಜ್‌ ನೀಡಿ: ಕಾಂಗ್ರೆಸ್‌ ಪುನರುಚ್ಚಾರ

ಲಾಕ್ ಡೌನ್ ಹೇರಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಡವರಿಗೆ ವಿಶೇಷ ಹಣಕಾಸು ಪ್ಯಾಕೇಜ್ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಬೆಂಗಳೂರು: ಲಾಕ್ ಡೌನ್ ಹೇರಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಡವರಿಗೆ ವಿಶೇಷ ಹಣಕಾಸು ಪ್ಯಾಕೇಜ್ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 14 ದಿನಗಳ ಲಾಕ್ಡೌನ್'ನಿಂದಾಗಿ ಬೀದಿ ಬದಿ ವ್ಯಾಪಾರಿಗಳು ಮತ್ತು ಕಾರ್ಮಿಕರು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಹೀಗೆ ಬಡವರಿಗೆ ಖಾತೆಗೆ 10,000 ರೂ.ಗಳನ್ನು ವರ್ಗಾಯಿಸುವ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಆಗ್ರಹಿಸಿದರು.

ರೈತರ ಬೆಳೆಗಳನ್ನು ಖರೀದಿಸುವವರು ಇಲ್ಲ ಮತ್ತು ಸಚಿವರು ಯಾರೂ ರೈತರ ಹೊಲಗಳಿಗೆ ಭೇಟಿ ನೀಡುತ್ತಿಲ್ಲ. ಸರ್ಕಾರ ಕೋವಿಡ್‌ 3ನೇ ಅಲೆ ಎದುರಿಸಲು ಸಜ್ಜಾಗಿರುವುದಾಗಿ ಹೇಳುತ್ತಿದೆ. ಮೊದಲು ಎರಡನೇ ತರಂಗವನ್ನು ನಿಯಂತ್ರಿಸೋಣ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಲಸಿಕೆ ಅಭಿಯಾನದಲ್ಲಿ ಕರ್ನಾಟಕ ಹಿಂದೆ ಉಳಿದಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದ ಯೋಜನೆಗಳ ಕುರಿತು ಸ್ಪಷ್ಟನೆಗಳೇ ಸಿಗುತ್ತಿಲ್ಲ. ಲಸಿಕೆಗಾಗಿ ನಾನೂ ಕೂಡ ಹೆಸರು ನೋಂದಾವಣಿ ಮಾಡಲು ಮುಂದಾಗಿದ್ದೆ. ಆದರೆ, ಸಾಧ್ಯವಾಗಲಿಲ್ಲ. ನನ್ನ ಮಕ್ಕಳಿಗೆ ಲಸಿಕೆ ಕೊಡಿಸಲು ಪ್ರಯತ್ನಿಸಿದ್ದೆ. ಆದರೆ, ನೋಂದಾವಣಿ ಸಾಧ್ಯವಾಗಲಿಲ್ಲ. ಸಿಇಬಿ ಬೋರ್ಡ್ ಸೀಟ್ ಕುರಿತು ಮಾಹಿತಿ ನೀಡಿದಂತೆ ಸರ್ಕಾರ ಕೂಡ ಲಸಿಕೆ ಕುರಿತು ಮಾಹಿತಿ ನೀಡಲಿ. ಫಲಾನುಭವಿಗಳಿಗೆ ಲಸಿಕೆ ನೀಡಲು ಯಾವ ರೀತಿಯ ಯೋಜನೆ ರೂಪಿಸಲಾಗಿದೆ ಎಂಬುದರ ಮಾಹಿತಿಯನ್ನು ಸರ್ಕಾರದಿಂದ ಕೇಳಲಾಗಿತ್ತು. ಆದರೆ, ನನಗೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ. 

ಕೋವಿಡ್ ಲಸಿಕೆ ಪಡೆದುಕೊಳ್ಳಲು ಹೆಸರು ನೋಂದಾಯಿಸುವ ಕೋವಿನ್ ಮತ್ತು ಆರೋಗ್ಯ ಸೇತು ವೇದಿಕೆಗಳಲ್ಲಿ ಸ್ಲಾಟ್‌ಗಳನ್ನು ಪಡೆದುಕೊಳ್ಳುವುದು ಸವಾಲಾಗಿದೆ. ಒಟಿಪಿ ಪಡೆಯಲು ಸಮಸ್ಯೆಯಿದೆ. ಸ್ಮಾರ್ಟ್ ಫೋನ್ ಗಳಿಲ್ಲದವರು ಏನು ಮಾಡಬೇಕು? 45 ವರ್ಷ ಮೇಲ್ಪಟ್ಟ 65 ಲಕ್ಷ ಜನರು ಇನ್ನೂ 2ನೇ ಡೋಸ್ ಲಸಿಕೆ ಪಡೆದುಕೊಳ್ಳಬೇಕಿದೆ. ಈಗಲೇ ರಾಜ್ಯದಲ್ಲಿ ಲಸಿಕೆಯ ಅಭಾವ ಎದುರಾಗಿದೆ. ಇದಕ್ಕೆ ಪರಿಹಾರವೇನು? ಜನರ ಜೀವವನ್ನು ಸರ್ಕಾರ ಅಪಾಯಕ್ಕೆ ಸಿಲುಕಿಸುತ್ತಿದೆ. ಪ್ರಮುಖವಾಗಿ ಹಿರಿಯ ನಾಗರೀಕರನ್ನು ಎಂದು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT