ಡಿಕೆ.ಶಿವಕುಮಾರ್ 
ರಾಜಕೀಯ

ಲಾಕ್‌ಡೌನ್‌ ಅವಧಿಯಲ್ಲಿ ಬಡವರಿಗೆ ಹಣಕಾಸು ನೆರವಿನ ಪ್ಯಾಕೇಜ್‌ ನೀಡಿ: ಕಾಂಗ್ರೆಸ್‌ ಪುನರುಚ್ಚಾರ

ಲಾಕ್ ಡೌನ್ ಹೇರಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಡವರಿಗೆ ವಿಶೇಷ ಹಣಕಾಸು ಪ್ಯಾಕೇಜ್ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಬೆಂಗಳೂರು: ಲಾಕ್ ಡೌನ್ ಹೇರಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಡವರಿಗೆ ವಿಶೇಷ ಹಣಕಾಸು ಪ್ಯಾಕೇಜ್ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 14 ದಿನಗಳ ಲಾಕ್ಡೌನ್'ನಿಂದಾಗಿ ಬೀದಿ ಬದಿ ವ್ಯಾಪಾರಿಗಳು ಮತ್ತು ಕಾರ್ಮಿಕರು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಹೀಗೆ ಬಡವರಿಗೆ ಖಾತೆಗೆ 10,000 ರೂ.ಗಳನ್ನು ವರ್ಗಾಯಿಸುವ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಆಗ್ರಹಿಸಿದರು.

ರೈತರ ಬೆಳೆಗಳನ್ನು ಖರೀದಿಸುವವರು ಇಲ್ಲ ಮತ್ತು ಸಚಿವರು ಯಾರೂ ರೈತರ ಹೊಲಗಳಿಗೆ ಭೇಟಿ ನೀಡುತ್ತಿಲ್ಲ. ಸರ್ಕಾರ ಕೋವಿಡ್‌ 3ನೇ ಅಲೆ ಎದುರಿಸಲು ಸಜ್ಜಾಗಿರುವುದಾಗಿ ಹೇಳುತ್ತಿದೆ. ಮೊದಲು ಎರಡನೇ ತರಂಗವನ್ನು ನಿಯಂತ್ರಿಸೋಣ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಲಸಿಕೆ ಅಭಿಯಾನದಲ್ಲಿ ಕರ್ನಾಟಕ ಹಿಂದೆ ಉಳಿದಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದ ಯೋಜನೆಗಳ ಕುರಿತು ಸ್ಪಷ್ಟನೆಗಳೇ ಸಿಗುತ್ತಿಲ್ಲ. ಲಸಿಕೆಗಾಗಿ ನಾನೂ ಕೂಡ ಹೆಸರು ನೋಂದಾವಣಿ ಮಾಡಲು ಮುಂದಾಗಿದ್ದೆ. ಆದರೆ, ಸಾಧ್ಯವಾಗಲಿಲ್ಲ. ನನ್ನ ಮಕ್ಕಳಿಗೆ ಲಸಿಕೆ ಕೊಡಿಸಲು ಪ್ರಯತ್ನಿಸಿದ್ದೆ. ಆದರೆ, ನೋಂದಾವಣಿ ಸಾಧ್ಯವಾಗಲಿಲ್ಲ. ಸಿಇಬಿ ಬೋರ್ಡ್ ಸೀಟ್ ಕುರಿತು ಮಾಹಿತಿ ನೀಡಿದಂತೆ ಸರ್ಕಾರ ಕೂಡ ಲಸಿಕೆ ಕುರಿತು ಮಾಹಿತಿ ನೀಡಲಿ. ಫಲಾನುಭವಿಗಳಿಗೆ ಲಸಿಕೆ ನೀಡಲು ಯಾವ ರೀತಿಯ ಯೋಜನೆ ರೂಪಿಸಲಾಗಿದೆ ಎಂಬುದರ ಮಾಹಿತಿಯನ್ನು ಸರ್ಕಾರದಿಂದ ಕೇಳಲಾಗಿತ್ತು. ಆದರೆ, ನನಗೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ. 

ಕೋವಿಡ್ ಲಸಿಕೆ ಪಡೆದುಕೊಳ್ಳಲು ಹೆಸರು ನೋಂದಾಯಿಸುವ ಕೋವಿನ್ ಮತ್ತು ಆರೋಗ್ಯ ಸೇತು ವೇದಿಕೆಗಳಲ್ಲಿ ಸ್ಲಾಟ್‌ಗಳನ್ನು ಪಡೆದುಕೊಳ್ಳುವುದು ಸವಾಲಾಗಿದೆ. ಒಟಿಪಿ ಪಡೆಯಲು ಸಮಸ್ಯೆಯಿದೆ. ಸ್ಮಾರ್ಟ್ ಫೋನ್ ಗಳಿಲ್ಲದವರು ಏನು ಮಾಡಬೇಕು? 45 ವರ್ಷ ಮೇಲ್ಪಟ್ಟ 65 ಲಕ್ಷ ಜನರು ಇನ್ನೂ 2ನೇ ಡೋಸ್ ಲಸಿಕೆ ಪಡೆದುಕೊಳ್ಳಬೇಕಿದೆ. ಈಗಲೇ ರಾಜ್ಯದಲ್ಲಿ ಲಸಿಕೆಯ ಅಭಾವ ಎದುರಾಗಿದೆ. ಇದಕ್ಕೆ ಪರಿಹಾರವೇನು? ಜನರ ಜೀವವನ್ನು ಸರ್ಕಾರ ಅಪಾಯಕ್ಕೆ ಸಿಲುಕಿಸುತ್ತಿದೆ. ಪ್ರಮುಖವಾಗಿ ಹಿರಿಯ ನಾಗರೀಕರನ್ನು ಎಂದು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT