ಸಿದ್ದರಾಮಯ್ಯ 
ರಾಜಕೀಯ

ಅಮಾಯಕರನ್ನು ಬಲಿತೆಗೆದುಕೊಂಡ ಚಾಮರಾಜನಗರ ದುರಂತದ ನಂತರವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಸಿದ್ದರಾಮಯ್ಯ

25 ಅಮಾಯಕರನ್ನು ಬಲಿತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ

ಬೆಂಗಳೂರು: ಬೆಂಗಳೂರು ನಗರಕ್ಕೆ ಹೋಲಿಸಿದರೆ ಜಿಲ್ಲೆಗಳಲ್ಲಿ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯ ತೀವ್ರ ಕೊರತೆಯಿರುವುದು ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೇ ಜಗಜ್ಜಾಹೀರಾಗಿದೆ. 25 ಅಮಾಯಕರನ್ನು ಬಲಿತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೊನಾ ಸೋಂಕು ತ್ವರಿತ ಗತಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ. ರಾಜ್ಯದಲ್ಲಿ ಈಗಿನ ಶೇಕಡಾ 55ರಷ್ಟು ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶದಿಂದ ವರದಿಯಾಗುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ತಿಂಗಳ ಹಿಂದೆ ಈ ಪ್ರಮಾಣ ಶೇಕಡಾ 30 ರಷ್ಟಿತ್ತು. ರಾಜ್ಯ ಸರ್ಕಾರ ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗದೆ ಜಿಲ್ಲೆ, ತಾಲೂಕು, ಗ್ರಾಮಗಳ ಕಡೆ ಗಮನಹರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಈಗಲೂ ಕಾಲ ಮಿಂಚಿಲ್ಲ, ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಯ ವ್ಯವಸ್ಥೆಯನ್ನು ಬಲಪಡಿಸಬೇಕು. ಜಿಲ್ಲೆಗಳಲ್ಲಿ ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣ ವ್ಯವಸ್ಥೆಯ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಹಿಸಿಕೊಡಬೇಕು. ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ನಡೆಸುವಂತೆ ತಾಕೀತು ಮಾಡಬೇಕು ಎಂದಿದ್ದಾರೆ.

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಅನುಸರಿಸಲಾಗಿದ್ದ ಸುರಕ್ಷತಾ ಕ್ರಮಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಕೂಡಾ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಉಲ್ಭಣಗೊಳ್ಳಲು ಕಾರಣ. ಕಳೆದ ಒಂದೆರಡು ತಿಂಗಳ ಅವಧಿಯಲ್ಲಿ ಹೆಚ್ಚು ಸೋಂಕಿನ ಪ್ರಕರಣಗಳಿದ್ದ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಜನ ಯಾವುದೇ ತಪಾಸಣೆ, ಪರೀಕ್ಷೆ ಇಲ್ಲದೆ ಕರ್ನಾಟಕಕ್ಕೆ ಬಂದಿದ್ದಾರೆ. ಬೆಂಗಳೂರಿನ ಸ್ಥಿತಿ ಬಿಗಡಾಯಿಸಿದ ನಂತರ ರಾಜಧಾನಿಯಿಂದಲೂ ಜನ ಹಿಂಡುಗಟ್ಟಿಕೊಂಡು ಜಿಲ್ಲೆಗಳಿಗೆ ತೆರಳಿದ್ದಾರೆ. ಅಂತರರಾಜ್ಯ ಮಾತ್ರವಲ್ಲ ಅಂತರಜಿಲ್ಲಾ ಸಂಚಾರವನ್ನು ಕೂಡಾ ನಿರ್ಬಂಧಿಸಬೇಕು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT