ಸಿಟಿ ರವಿ 
ರಾಜಕೀಯ

'ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ?'

ಮಾನವೀಯ ಕಳಕಳಿ ಇದ್ದವರು ವೋಟಿಗಾಗಿ ಕೊಲೆಗಡುಕರನ್ನು ಬೆಂಬಲಿಸುವ ಹೀನ ರಾಜಕಾರಣ ಮಾಡುವುದಿಲ್ಲ. ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ?

ಬೆಂಗಳೂರು: ಬಿಜೆಪಿಗೆ ನ್ಯಾಯಾಂಗದ ಗೌರವದ ಬಗ್ಗೆ ಯಾರೂ ಪಾಠ ಹೇಳಿಕೊಡಬೇಕಾಗಿಲ್ಲ, ನ್ಯಾಯಾಂಗದ ಬಗ್ಗೆ ನಮಗೆ ಸದಾ ಗೌರವವಿದೆ ಎನ್ನುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ದುರಹಂಕಾರಿ ಯಾರು ಸಿದ್ದರಾಮಯ್ಯನವರೇ? ಅವರವರ ಹಾವಭಾವಗಳು ದುರಹಂಕಾರಿ ಯಾರೆಂದು ಹೇಳುತ್ತವೆ, ಅಧಿಕಾರದ ಮದದಿಂದ ಮೆರೆದವರು ಯಾರೆಂದು ರಾಜ್ಯಕ್ಕೆ ಗೊತ್ತಿದೆ. ಮಾನವೀಯ ಕಳಕಳಿ ಇದ್ದವರು ವೋಟಿಗಾಗಿ ಕೊಲೆಗಡುಕರನ್ನು ಬೆಂಬಲಿಸುವ ಹೀನ ರಾಜಕಾರಣ ಮಾಡುವುದಿಲ್ಲ. ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ?

ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಯಾವ ಪಕ್ಷ ನ್ಯಾಯಾಲಯದ ತೀರ್ಪಿನ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸ್ವಾತಂತ್ರ್ಯಹರಣ ಮಾಡಿತ್ತೋ, ಅದೇ ಪಕ್ಷ ಇಂದು ಏಕಾಏಕಿ ನ್ಯಾಯಾಲಯದ ಬಗ್ಗೆ ಗೌರವ ವ್ಯಕ್ತಪಡಿಸುತ್ತಿದೆ ಎಂದು  ಕುಟುಕಿದ್ದಾರೆ.

ಮುಂದುವರಿದು, ಯಾವ ಪಕ್ಷವು ನ್ಯಾಯಾಲಯಗಳು ಮೋದಿಯ ಆಲಯಗಳಾಗಿವೆ ಎಂದು ಆರೋಪಿಸಿ ಸಿಎಎ, ರಾಮ ಮಂದಿರ ತೀರ್ಪಿನ ವಿರುದ್ಧ ಅಪಪ್ರಚಾರ ಮಾಡಿತ್ತೋ, ಅದು ಈಗ ನ್ಯಾಯಾಲಯಗಳ ಪರವಾಗಿ ಗೌರವ ವ್ಯಕ್ತಪಡಿಸುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ. ಮಾನ್ಯ ಸಿದ್ದರಾಮಯ್ಯನವರೇ ಮತ್ತು ದಿನೇಶ್‌ ಗುಂಡೂರಾವ್‌ ಅವರೇ ಏನಂತಿರಾ? ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಅಷ್ಟಕ್ಕೂ ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾದರೂ ಏನು? ನ್ಯಾಯಾಧೀಶರೇನು ಸರ್ವಜ್ಞರಲ್ಲ. ಅವರೂ ತಾಂತ್ರಿಕ ಸಮಿತಿಯ ಸಲಹೆಯ ಮೇರೆಗೆ ನಿರ್ದೇಶನ ನೀಡುತ್ತಾರೆ ಎಂದಿದ್ದೇನೆ. ಸರ್ವೋಚ್ಚ ನ್ಯಾಯಾಲಯವೂ ಇದನ್ನೇ ಹೇಳಿದೆ. ಇದರಲ್ಲಿ ತಪ್ಪೇನಿದೆ? ಮೊಸರಲ್ಲಿ ಕಲ್ಲು ಹುಡುಕುವ ಮನೋಭಾವದವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT