ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ 
ರಾಜಕೀಯ

ಬಿಜೆಪಿ ಶಾಸಕರಿಂದ ಬೆಡ್ ಬ್ಲಾಕಿಂಗ್ ದಂಧೆ, ಜನರಿಗೆ ಸಂಕಷ್ಟ: ರಾಮಲಿಂಗಾರೆಡ್ಡಿ ಆರೋಪ

ನಗರದಲ್ಲಿ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಹಚರ ಪ್ರಭಾವದಿಂದ ಬೆಡ್ ಬ್ಲಾಕಿಂಗ್ ದಂಧೆ ಹೆಚ್ಚಾಗಿ ಜನಸಾಮಾನ್ಯರಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗುವುದು ಬಹಳ ಕಷ್ಟಕರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಬೆಂಗಳೂರು: ನಗರದಲ್ಲಿ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಹಚರ ಪ್ರಭಾವದಿಂದ ಬೆಡ್ ಬ್ಲಾಕಿಂಗ್ ದಂಧೆ ಹೆಚ್ಚಾಗಿ ಜನಸಾಮಾನ್ಯರಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗುವುದು ಬಹಳ ಕಷ್ಟಕರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಬಿಟಿಎಂ ವಿಧಾನ ಸಭಾ ಕ್ಷೇತ್ರದ ಕೋರಮಂಗಲದ ಒಳಾಂಗಣ ಸ್ಟೇಡಿಯಂನಲ್ಲಿ 24x7 ತುರ್ತು ಟ್ರೈಯೇಜ್ ಸೆಂಟರ್, ಆಕ್ಸಿಜನ್ ಹಾಗೂ  ಕೋವಿಡ್ ಬೆಡ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ಬೆಡ್ ಬ್ಲಾಕಿಂಗ್ ದಂಧೆಯಿಂದಾಗಿ ಕೋವಿಡ್ ಗೆ ಚಿಕಿತ್ಸೆ ಸಿಗದೇ  ಜನರು ಸಾವನ್ನಪ್ಪುತ್ತಿದ್ದಾರೆ ಎಂದರು. 

ಎಲ್ಲ ಜನಸಾಮಾನ್ಯ ಕೋವಿಡ್ ಪೀಡಿತರಿಗೆ ಸೂಕ್ತ  ಬೆಡ್ ವ್ಯವಸ್ಥೆ ಹಾಗೂ ಉತ್ತಮ ಚಿಕಿತ್ಸೆ ನೀಡುವ ಉದ್ದೇಶದಿಂದ ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಬಿಎಂಪಿ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ದಿನದ 24ಗಂಟೆಗಳು ಸೇವೆ ಓದಗಿಸಲು ಕ್ಷೇತ್ರದಲ್ಲಿ ಎರಡು ಕಡೆಗಳಲ್ಲಿ ಉಚಿತ ಬೆಡ್ ಸೆಂಟರ್ ಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದರು.

ಬಿಟಿಎಂ ಕ್ಷೇತ್ರದಲ್ಲಿ ನಿರಂತರ ಕಾರ್ಯನಿರ್ವಹಿಸುವ ತುರ್ತು ಟ್ರೈಯೇಜ್ ಸೆಂಟರ್, ಆಕ್ಸಿಜನ್ ಹಾಗೂ ಕೋವಿಡ್ ಬೆಡ್ ಸೆಂಟರ್ ಸಿದ್ಧವಿದೆ.ಜನರು ಭಯ ಬಿಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ನಡಿಗೆ ಜಾಗೃತಿ ಮೂಡಿಸಿದರು.                 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT