ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ 'ಜನಹಿತದ ಲಾಕ್‌ಡೌನ್‌' ಮಾಡಲಿ: ಹೆಚ್‌ ಡಿ ಕುಮಾರಸ್ವಾಮಿ

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಒಂದುವೇಳೆ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಒಂದುವೇಳೆ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‌ಡಿಕೆ, ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರಕ್ಕೆ 'ಜನಹಿತದ ಲಾಕ್‌ಡೌನ್‌' ಮಾಡಬೇಕೆಂದು ಸೂಚಿಸಿದ್ದೆವು. ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್‌ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್‌ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯವಾಗಿದೆ ಎಂದಿದ್ದಾರೆ.

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು. 

ಲಾಕ್‌ಡೌನ್‌ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್‌ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರದ ಕರ್ತವ್ಯವಾಗಿದೆ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT