ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ 'ಜನಹಿತದ ಲಾಕ್‌ಡೌನ್‌' ಮಾಡಲಿ: ಹೆಚ್‌ ಡಿ ಕುಮಾರಸ್ವಾಮಿ

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಒಂದುವೇಳೆ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಒಂದುವೇಳೆ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‌ಡಿಕೆ, ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರಕ್ಕೆ 'ಜನಹಿತದ ಲಾಕ್‌ಡೌನ್‌' ಮಾಡಬೇಕೆಂದು ಸೂಚಿಸಿದ್ದೆವು. ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್‌ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್‌ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯವಾಗಿದೆ ಎಂದಿದ್ದಾರೆ.

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು. 

ಲಾಕ್‌ಡೌನ್‌ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್‌ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರದ ಕರ್ತವ್ಯವಾಗಿದೆ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT