ನರೇಂದ್ರ ಮೋದಿ 
ರಾಜಕೀಯ

ತನ್ನ ಕುಕೃತ್ಯಗಳಿಂದ ಜನರ ಜೀವಗಳಿಗೆ ಯಮನಾದ 'ಕಾಂಗ್ರೆಸ್' ಮನೆಗೆ ಮಗನೂ ಆಗಲಿಲ್ಲ, ಸ್ಮಶಾನಕ್ಕೆ ಹೆಣವೂ ಆಗಲಿಲ್ಲ

ಕೊರೋನಾ ಬಿಕ್ಕಟ್ಟಿನ ನಿರ್ವಹಣೆ ವಿಚಾರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ದೇಶದ ಹೆಸರು ಕೆಡಿಸಲು ಕಾಂಗ್ರೆಸ್‌ ಪಕ್ಷವು ಟೂಲ್‌ಕಿಟ್‌ ಮೂಲಕ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಬೆಂಗಳೂರು: ಕೊರೋನಾ ಬಿಕ್ಕಟ್ಟಿನ ನಿರ್ವಹಣೆ ವಿಚಾರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ದೇಶದ ಹೆಸರು ಕೆಡಿಸಲು ಕಾಂಗ್ರೆಸ್‌ ಪಕ್ಷವು ಟೂಲ್‌ಕಿಟ್‌ ಮೂಲಕ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. 

ಈ ಸಂಬಂಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ  ಕಾಂಗ್ರೆಸ್ ಪಕ್ಷ ಮನೆಗೆ ಮಗನೂ ಆಗಲಿಲ್ಲ, ಸ್ಮಶಾನಕ್ಕೆ ಹೆಣವೂ ಆಗಲಿಲ್ಲʼ ಎಂದು ಕಿಡಿ ಕಾರಿದ್ದಾರೆ.

ಮನೆಗೆ ಮಗನೂ ಆಗಲಿಲ್ಲ ಸ್ಮಶಾನಕ್ಕೆ ಹೆಣವೂ ಆಗಲಿಲ್ಲ ಎನ್ನುವಂತಹ ಒಂದು ರಾಜಕೀಯ ಪಕ್ಷ ನಮ್ಮ ದೇಶದಲ್ಲಿ ಇದ್ದರೆ ಅದು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್. ಜನ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಮೂಲೆಗುಂಪು ಮಾಡಿದ್ದರೂ ಅವರಿಗಿನ್ನು ಬುದ್ಧಿ ಬಂದಿಲ್ಲ. ಕಾಂಗ್ರೆಸ್ ಭಾರತ ದೇಶಕ್ಕೆ, ದೇಶದ ಜನರಿಗೆ ದೇಶ ವಿದೇಶದಲ್ಲಿ ಅಪಪ್ರಚಾರ ಮಾಡಲು ತಯಾರಿಸಿದ ಟೂಲ್‌ಕಿಟ್ ಇಲ್ಲಿದೆ ನೋಡಿ. 

ತನ್ನ ಸ್ವ ಸಾಮರ್ಥ್ಯದಿಂದ ಏನನ್ನೂ ಮಾಡಲಾಗದ ಈ ಪಕ್ಷ ದೇಶ ವಿದೇಶಗಳಲ್ಲಿ ಹೆಚ್ಚುತ್ತಿರುವ ಭಾರತದ ಲೋಕಪ್ರಿಯತೆ ಹಾಗೂ ಶಕ್ತಿಯನ್ನು ಕುಂದಿಸುವ ನಿಟ್ಟಿನಲ್ಲಿ ಮತ್ತು ನರೇಂದ್ರ ಮೋದಿ ಹಾಗೂ ಬಿಜೆಪಿಯ ಜನಪ್ರಿಯತೆಗೆ ಕುಂದು ತರಲು ಹೇಗೆ ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ನಾವೆಲ್ಲರೂ ಗಮನಿಸಬೇಕು.

ಕೊರೊನಾ ಸಂಕಷ್ಟದ ಸಮಯದಲ್ಲಿ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಮೋದಿಜಿಯವರ ನೇತೃತ್ವದ ಸರಕಾರದ ವಿರುದ್ಧ ಜನರಲ್ಲಿ ಅವಿಶ್ವಾಸ ಮೂಡಿಸಿ, ದೇಶದಾದ್ಯಂತ ದಂಗೆ ಎಬ್ಬಿಸುವ ಉದ್ದೇಶದಿಂದ ಮಾಡಿದ ಈ ಟೂಲ್ ಕಿಟ್ ದೇಶದ ಅಮಾಯಕ ಜನರ ಪ್ರಾಣದ ಜೋತೆ ಚೆಲ್ಲಾಟ ಆಡಿದೆ. 

ಈ ಕೋವಿಡ್ ಸಂದರ್ಭದಲ್ಲಿ ಜನರ ಪ್ರಾಣ ರಕ್ಷಣೆ ಮಾಡುವಲ್ಲಿ ಸರ್ಕಾರದ ಜೊತೆ ಇರಬೇಕಾದ ವಿರೋಧ ಪಕ್ಷ, ತನ್ನ ಕುಕೃತ್ಯಗಳ ಮುಖೇನ ಜನರ ಜೀವಗಳಿಗೆ ಯಮನಾಗಿದ್ದು ದೌರ್ಭಾಗ್ಯವೇ ಹೊರತು ಬೇರೆ ಏನಲ್ಲ. ಲಸಿಕೆ ನಾವೇ ಕೊಡುತ್ತೇವೆ ಎಂಬ ಕಾಂಗ್ರೇಸ್ ರಾಜ್ಯಾಧ್ಯಕ್ಷನ ಹೇಳಿಕೆ, ಅತ್ತೆಯ ಹಣವನ್ನು ಅಳಿಯ ದಾನ ಮಾಡಿದ ಅನ್ನುವ ಹಾಗೆ ಸರಕಾರದ ನೂರು ಕೋಟಿ ಹಣವನ್ನು ಸರಕಾರಕ್ಕೆ ಕೊಡುತ್ತೇವೆ ಎಂಬ ಸಿದ್ದರಾಮಯ್ಯ ಅವರ ಹಗಲು ನಾಟಕ, ಬೆಡ್ ಗಳನ್ನು ಬ್ಲಾಕ್ ಮಾಡಿ ತಮ್ಮ ಕಾಲು ಹಿಡಿದವರಿಗೆ ನೀಡುವ ಯೋಜನೆಗಳು, ದೆಹಲಿಯಲ್ಲಿ ಶ್ರೀನಿವಾಸನೆಂಬ ಯೂತ್ ಕಾಂಗ್ರೆಸ್ ಅಧ್ಯಕ್ಷ ಆಕ್ಸಿಜನ್ ಸಿಲಿಂಡರ್ ಹಿಡಿದು ಸುತ್ತಾಡಿದ್ದು, ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷನ ನೇತ್ರತ್ವದಲ್ಲಿ ಸ್ಟಿರಾಯ್ದ್ ಮಾತ್ರೆಗಳನ್ನು ಕೊರೊನ ಕಿಟ್ ಎಂದು ಹಂಚಿದ್ದು,  ವಿಧಾನ ಸೌಧದ ಮುಂದೆ ನಲಪಾಡ್ಡ್ ಎಂಬ ಯೂತ್ ಕಾಂಗ್ರೇಸ್ ನಾಯಕನೊಬ್ಬ ಆಂಬ್ಯುಲೆನ್ಸ್ ಸ್ಟಂಟ್ ಮಾಡಿದ್ದು ಇವೆಲ್ಲವೂ ಈ ಟೂಲ್ ಕಿಟ್ ಎಂಬ ಮಹಾ ನಾಟಕದ ಭಾಗವೇ ಹೊರತಾಗಿ ಬೇರೆ ಏನೂ ಅಲ್ಲ. 

ಮಧ್ಯಪ್ರಾಚ್ಯದಲ್ಲೊಂದು ಇಸ್ರೇಲ್ ಎನ್ನುವ ಪುಟ್ಟ ರಾಷ್ಟ್ರವಿದೆ, ಆ ರಾಷ್ಟ್ರದ ವಿರೋಧ ಪಕ್ಷ ತನ್ನ ರಾಷ್ಟ್ರಕ್ಕಾಗಿ, ತನ್ನ ರಾಷ್ಟ್ರದ ಮಾನ, ಸಮ್ಮಾನದ ರಕ್ಷಣೆಗಾಗಿ ಸರಕಾರದ ಜೊತೆ ನಿಂತು ಕೆಲಸ ಮಾಡುವುದನ್ನು ನೋಡಿದಾಗ ಈ ಮೇಲೆ ಹೇಳಿದ ಮಾತು ನಿಜ ಎನ್ನಿಸುತ್ತದೆ. ಕಾಂಗ್ರೆಸ್ ಪಕ್ಷ "ಮನೆಗೆ ಮಗನೂ ಆಗಲಿಲ್ಲ, ಸ್ಮಶಾನಕ್ಕೆ ಹೆಣವೂ ಆಗಲಿಲ್ಲ".
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT