ಯಡಿಯೂರಪ್ಪ 
ರಾಜಕೀಯ

ಯಾರೋ ಎಲ್ಲಿಗೋ ಹೋಗಿ ಬಂದರೆ ನನಗೇನು?: ನಾಯಕತ್ವ ಬದಲಾವಣೆ ಚಟುವಟಿಕೆ ಬಗ್ಗೆ ಸಿಎಂ ಕೆಂಡಾಮಂಡಲ!

ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

'ನನ್ನ ಮುಂದೆ ಇರುವುದು ಕೋವಿಡ್ ನಿರ್ವಹಣೆ ಮಾತ್ರ. ಅದರ ನಿಯಂತ್ರಣ ಹಾಗೂ ನಿರ್ವಹಣೆ ಕೆಲಸಕ್ಕೆ ಮಾತ್ರ ಆದ್ಯತೆ' ಎಂದು ಯಡಿಯೂರಪ್ಪ ಗರಂ ಆಗಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು ಕೊರೋನಾ ನಿಯಂತ್ರಿಸುವುದು, ಜನಹಿತ ಕಾಪಾಡೋದು ನನ್ನ ಆದ್ಯತೆ ಎಂದರು.‌ ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದರು ಅಂದರೆ, ಅವರಿಗೆ ಉತ್ತರ ಕೊಟ್ಟು ಕಳಿಸಿದಾರಲ್ಲ ಎಂದು ಪರೋಕ್ಷವಾಗಿ ಸಚಿವ ಸಿ.ಪಿ ಯೋಗೀಶ್ವರ್ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಪಕ್ಷದ ಶಾಸಕಾಂಗ ಸಭೆ ಕರೆಯುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅದನ್ನು ನಿಮ್ಮ ಜೊತೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ' ಎಂದರು. ಮೇಕೆ ದಾಟು ವಿಚಾರಕ್ಕೆ ಸಂಬಂಧಿಸಿದಂತೆ ಚೆನ್ನೈ ಹಸಿರು ಪೀಠ ಸಮಿತಿ ರಚನೆ ಮಾಡಿರುವ ವಿಚಾರದಲ್ಲಿ ಮಾತನಾಡಿ, ಈ ಕುರಿತಾಗಿ ಚರ್ಚೆ ಮಾಡುತ್ತೇವೆ. ಅದನ್ನು ತಡೆಯೋಕೆ ಏನು ಮಾಡಬೇಕೋ ಮಾಡುತ್ತೇವೆ. ಹೈಕೋರ್ಟ್ ಮೊರೆ ಹೋಗ್ತಿವಿ, ಸುಪ್ರೀಂ ಕೋರ್ಟ್‌ಗೆ ಕೂಡ ಹೋಗುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವರ್ಷಾಂತ್ಯದ ವೇಳೆಗೆ ಭಾರತ ರಷ್ಯಾದ ತೈಲ ಆಮದನ್ನು 'ಹಂತ ಹಂತವಾಗಿ ನಿಲ್ಲಿಸಲಿದೆ ': ಟ್ರಂಪ್ ಪುನರುಚ್ಛಾರ

ತಂದೆ ರಾಜಕೀಯ ಜೀವನ ಮುಗಿಯಿತು; ಯತೀಂದ್ರ ಹೇಳಿಕೆಯಿಂದ ಸಂಚಲನ, ರಾಜಕೀಯ ಜೀವನದ ಕೊನೆಗಾಲದಲ್ಲೂ ಡಿಕೆಶಿಗೆ ಚೆಕ್‌ಮೇಟ್ ನೀಡಲು ಸಿದ್ದು ಟೀಮ್ ಮುಂದು..!

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಅಲಂಕರಿಸಿದ ಜಾವೆಲಿನ್ ಥ್ರೋ ಸ್ಟಾರ್ ನೀರಜ್ ಚೋಪ್ರಾ

ಬ್ಯುಸಿನೆಸ್ ಕಾರಿಡಾರ್'ಗಾಗಿ ಭೂಮಿ ಕಳೆದುಕೊಂಡವರಿಗೆ 3 ಪಟ್ಟು ಪರಿಹಾರ: ರಾಜ್ಯ ಸರ್ಕಾರ

'ಮಹಾತ್ಮ ಗಾಂಧಿ ಕೂತ ಸ್ಥಾನದಲ್ಲಿ ಇಂದು ಖರ್ಗೆ ಕೂತಿದ್ದಾರೆ: ಅಡ್ವಾಣಿ ಸಾಧ್ಯವಿಲ್ಲ ಎಂದಿದ್ದನ್ನು ಖರ್ಗೆ ಮಾಡಿ ತೋರಿಸಿದ್ದಾರೆ'

SCROLL FOR NEXT