ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

'ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ'

ಜಿಂದಾಲ್ ಕಂಪನಿಗೆ ಬಿಜೆಪಿ ಸರ್ಕಾರ ಭೂಮಿ ನೀಡಿರುವುದರ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು: ಜಿಂದಾಲ್ ಕಂಪನಿಗೆ ಬಿಜೆಪಿ ಸರ್ಕಾರ ಭೂಮಿ ನೀಡಿರುವುದರ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹರಿಹಾಯ್ದಿದ್ದಾರೆ.

ಜಿಂದಾಲ್‌ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ಹೇಳಿದ್ದಾರೆ.

ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ
ಹೊತ್ತುಕೊಳ್ಳುವಂಥಾಗಿದೆ ಎಂದು ಕಿಡಿಕಾರಿದ್ದಾರೆ.

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ 'ಸಂಸ್ಕೃತಿ'. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ
ಎಂದು ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ