ನಳಿನ್ ಕುಮಾರ್ ಕಟೀಲು 
ರಾಜಕೀಯ

ನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪ ನಮ್ಮ ಸರ್ವಸಮ್ಮತ ನಾಯಕ: ನಳಿನ್ ಕುಮಾರ್ ಕಟೀಲು

ಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪನವರು ನಮ್ಮ ಸರ್ವಸಮ್ಮತ ನಾಯಕರು, ಇನ್ನೆರಡು ವರ್ಷಗಳ ಕಾಲ ಸರ್ಕಾರದ ಅವಧಿ ಮುಗಿಯುವವರೆಗೂ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪನವರು ನಮ್ಮ ಸರ್ವಸಮ್ಮತ ನಾಯಕರು, ಇನ್ನೆರಡು ವರ್ಷಗಳ ಕಾಲ ಸರ್ಕಾರದ ಅವಧಿ ಮುಗಿಯುವವರೆಗೂ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಕೋವಿಡ್ ಸೋಂಕು ತಡೆಗಟ್ಟುವುದೇ ಬಿಜೆಪಿ ನಾಯಕರ ಪ್ರಮುಖ ಆದ್ಯತೆ. ಸಚಿವರು, ಶಾಸಕರಿಗೆಲ್ಲಾ ಅದುವೇ ಸದ್ಯಕ್ಕೆ ಪ್ರಧಾನ ವಿಷಯವಾಗಬೇಕು. ಅದು ಬಿಟ್ಟು ಬೇರೆ ವಿಚಾರಗಳ ಕಡೆಗೆ ಗಮನ ಕೊಡಬಾರದು ಎಂದು ನಾನು ಮತ್ತೊಮ್ಮೆ ಸ್ಪಷ್ಟವಾಗಿ ಸೂಚನೆ ನೀಡುತ್ತೇನೆ. ಈ ಹಿಂದೆಯೂ ನಾನು ಶಾಸಕರಿಗೆ ಇದನ್ನೇ ಹೇಳಿದ್ದೆ ಎಂದರು.

ಕೋವಿಡ್ ಎರಡನೇ ಅಲೆ ಸಾಂಕ್ರಾಮಿಕ ರಾಜ್ಯದ ಮುಂದಿರುವ ಬಹಳ ದೊಡ್ಡ ಸಮಸ್ಯೆಯಾಗಿದ್ದು ಅದು ಮುಗಿಯುವವರೆಗೆ ಬೇರೇನೂ ವಿಚಾರಗಳ ಬಗ್ಗೆ ಮಾತನಾಡುವ ಹಾಗಿಲ್ಲ. ಬಿಜೆಪಿ ಶಾಸಕಾಂಗ ಪಕ್ಷ ಸಭೆ ಕೂಡ ನಡೆಯುವುದಿಲ್ಲ ಎಂದು ಕಟೀಲ್ ತಿಳಿಸಿದರು.

ಸಚಿವ ಯೋಗೇಶ್ವರ್ ಅವರಲ್ಲಿ ವಿವರ ಕೇಳುತ್ತೇನೆ: ರಾಜ್ಯ ಸರ್ಕಾರದಲ್ಲಿ ಎಲ್ಲವೂ ಸರಿಯಲ್ಲ, ಯಡಿಯೂರಪ್ಪ ನಾಯಕತ್ವ ಬಗ್ಗೆ ಸಚಿವರು ಪ್ರಶ್ನೆಯೆತ್ತಿದ್ದಾರೆ, ದೆಹಲಿಗೆ ಹಲವು ಸಚಿವರು ಹೋಗಿ ಬಂದಿದ್ದಾರೆ ಎಂಬ ಬಗ್ಗೆ ಸುದ್ದಿಯಾಗಿತ್ತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್, ಇದು ಮೂರು ಪಕ್ಷದ ಹೊಂದಾಣಿಕೆಯ ಸರ್ಕಾರ ಎಂದು ಹೇಳಿದ್ದರು, ಈ ಹೇಳಿಕೆ ಈಗ ವ್ಯಾಪಕ ಸುದ್ದಿಯಾಗುತ್ತಿದ್ದು, ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟವಾಗಿದೆ. ಹೈಕಮಾಂಡ್ ಸಿಎಂ ಕುರ್ಚಿಯಿಂದ ಯಡಿಯೂರಪ್ಪನವರನ್ನು ಕೆಳಗಿಳಿಸುತ್ತದೆಯೇ ಎಂದು ಮತ್ತೊಮ್ಮೆ ಚರ್ಚೆಯಾಗುತ್ತಿದೆ. 

ಈ ಬಗ್ಗೆ ನಳಿನ್ ಕುಮಾರ್ ಕಟೀಲ್ ಅವರನ್ನು ಕೇಳಿದಾಗ, ಇಂದು ಸಚಿವ ಯೋಗೇಶ್ವರ್ ಅವರಲ್ಲಿ ವಿವರಣೆ ಕೇಳುತ್ತೇನೆ, ಯಾವ ಕಾರಣಕ್ಕಾಗಿ, ಯಾವ ಸಂದರ್ಭದಲ್ಲಿ ಅವರು ಹೀಗೆ ಹೇಳಿದ್ದಾರೆ, ಅವರು ಈ ಹೇಳಿಕೆ ನೀಡಲು ಕಾರಣವೇನೆಂದು ಕೇಳುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT