ಈಶ್ವರಪ್ಪ 
ರಾಜಕೀಯ

ಸಚಿವ ಯೋಗೇಶ್ವರ್‌ಗೆ ಇಷ್ಟವಿಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಲಿ: ಕೆ.ಎಸ್. ಈಶ್ವರಪ್ಪ

ಮುಖ್ಯಮಂತ್ರಿ ಮೇಲೂ ನಂಬಿಕೆ ಇಲ್ಲ. ಹೈಕಮಾಂಡ್ ಮೇಲೂ ನಂಬಿಕೆ ಇಲ್ಲ ಅನ್ನುವುದಾದರೆ ಸಿ. ಪಿ. ಯೋಗೇಶ್ವರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗ: ಮುಖ್ಯಮಂತ್ರಿ ಮೇಲೂ ನಂಬಿಕೆ ಇಲ್ಲ. ಹೈಕಮಾಂಡ್ ಮೇಲೂ ನಂಬಿಕೆ ಇಲ್ಲ ಅನ್ನುವುದಾದರೆ ಸಿ.ಪಿ. ಯೋಗೇಶ್ವರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಯೋಗೇಶ್ವರ್‌ ಅವರಿಗೆ ಏನೇ ಅಸಮಾಧಾನವಿದ್ದರೂ ಕೇಂದ್ರ ನಾಯಕರ ಗಮನಕ್ಕೆ ತರಬೇಕು. ಅದನ್ನು ಯೋಗೇಶ್ವರ್‌ ಮಾಡಿದ್ದಾರೆ. ಆದರೆ, ಹೊರಗಡೆ ಅವರು ಹೇಳಿಕೆ ನೀಡಿದ್ದು ಸರಿಯಲ್ಲ. ಅಸಮಾಧಾನವಿದ್ದಲ್ಲಿ ಸರ್ಕಾರದಿಂದ ಹೊರಹೋಗಬಹುದು. ಸಮಾಧಾನದಿಂದ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಳ್ಳಬೇಕು. 

ರಾಜ್ಯ ಬಿಜೆಪಿಯ ಎಲ್ಲಾ ಶಾಸಕರು ಕಲ್ಲು ಬಂಡೆಗಳಂತೆ ಒಗ್ಗಟ್ಟಾಗಿ ಇದ್ದೇವೆ. ಕೇಂದ್ರ ನಾಯಕರು ಸಿಎಂ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧ" ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಮಾಧ್ಯಮಗಳಿಗೆ ಆಹಾರವಾಗಬಾರದು. ಯೋಗೇಶ್ವರ್‌ ಹೇಳಿಕೆ ಸರಿಯಿದ್ದರೆ ಪಕ್ಷದ ವರಿಷ್ಠರು ಗಮನ ಹರಿಸುತ್ತಾರೆ ಎಂದರು.

ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ ಎಂದು ನಾನು ಹೇಳುತ್ತಿಲ್ಲ. ಅದನ್ನು ಒಪ್ಪುವುದೂ ಇಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲವೆಂದು ಪಕ್ಷದ ವರಿಷ್ಠರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT