ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ತಮ್ಮ ಪತ್ನಿಯೊಂದಿಗೆ ಮತ ಹಾಕಿದ್ದ ಸಂದರ್ಭ 
ರಾಜಕೀಯ

ಹಾನಗಲ್-ಸಿಂದಗಿ ಉಪ ಚುನಾವಣೆ: ಮತ ಎಣಿಕೆ ಆರಂಭ, ಮಧ್ಯಾಹ್ನ ವೇಳೆಗೆ ಫಲಿತಾಂಶ ಪ್ರಕಟ 

ರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮಂಗಳವಾರ ಮಧ್ಯಾಹ್ನ ಹೊತ್ತಿಗೆ ಹೊರಬೀಳಲಿದೆ.  ಇನ್ನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. 

ಬೆಂಗಳೂರು: ರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮಂಗಳವಾರ ಮಧ್ಯಾಹ್ನ ಹೊತ್ತಿಗೆ ಹೊರಬೀಳಲಿದೆ.  ಇನ್ನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. 

ಸಿಂದಗಿ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ವಿಜಯಪುರದ ಸೈನಿಕ ಶಾಲೆಯಲ್ಲಿ, ಹಾನಗಲ್ ಕ್ಷೇತ್ರದ ಮತ ಎಣಿಕೆ ಕಾರ್ಯ ಹಾವೇರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದೆ. ಸಿಂದಗಿ ಕ್ಷೇತ್ರದಲ್ಲಿ 1,62,852 ಮತ ಚಲಾವಣೆಯಾಗಿದ್ದು, 22 ಸುತ್ತಿನ ಮತ ಎಣಿಕೆ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ. ಇನ್ನು ಹಾನಗಲ್ ನಲ್ಲಿ 1,71, 264  ಮತ ಚಲಾವಣೆಯಾಗಿದ್ದು 19 ಸುತ್ತಿನ ಮತ ಎಣಿಕೆ ನಂತರ ಫಲಿತಾಂಶ ಹೊರಬೀಳಲಿದೆ.

ಮೊನ್ನೆ 30ರಂದು ಆ ಎರಡು ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಸಿಂದಗಿ ಕ್ಷೇತ್ರದಲ್ಲಿ ಶೇಕಡಾ 69.41ರಷ್ಟು ಮತ್ತು ಹಾನಗಲ್ ನಲ್ಲಿ ಶೇಕಡಾ 83.72ರಷ್ಟು ಮತದಾನವಾಗಿದೆ. 

2023ರ ವಿಧಾನಸಭೆ ಚುನಾವಣೆಗೆ ಮುನ್ನ ಇದು ಮಿನಿ ಸಮರವಾಗಿದ್ದು ರಾಜ್ಯದ ರಾಜಕೀಯ ದಿಕ್ಸೂಚಿಯನ್ನು ಸೂಚಿಸಲಿದೆ ಎಂದು ಹೇಳಲಾಗುತ್ತದೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರು, ಹಾನಗಲ್ ನಿಂದ ಬಿಜೆಪಿಯಿಂದ ಶಿವರಾಜ್ ಸಜ್ಜನರ್, ಕಾಂಗ್ರೆಸ್ ನಿಂದ ಸಿಂದಗಿ ಕ್ಷೇತ್ರದಲ್ಲಿ ಅಶೋಕ್ ಮನಗೂಳಿ, ಹಾನಗಲ್ ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್ ನಿಂದ ಸಿಂದಗಿಯಲ್ಲಿ ನಾಜಿಯಾ ಶಕಿಲಾ ಅಂಗಡಿ, ಹಾನಗಲ್ ನಿಂದ ನಿಯಾಜ್ ಖಾನ್ ಸ್ಪರ್ಧಿಸಲಿದ್ದಾರೆ. 

ಮತ ಎಣಿಕೆ ಕೇಂದ್ರಗಳಲ್ಲಿ ತೀವ್ರ ಭದ್ರತೆ: ಮತ ಎಣಿಕೆ ನಡೆಯುವಾಗ ಮತ್ತು ಫಲಿತಾಂಶ ಹೊರಬಿದ್ದ ಮೇಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಹೆಚ್ಚುವರಿ ಪೊಲೀಸ್ ಪಡೆಯನ್ನು ಸಹ ನಿಯೋಜಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT