ಡಿ ಕೆ ಶಿವಕುಮಾರ್ 
ರಾಜಕೀಯ

ಹಾನಗಲ್ ಕ್ಷೇತ್ರದಲ್ಲಿನ ಸೋಲು ಬಿಜೆಪಿಗೆ ಮುಖಭಂಗ: ಡಿ ಕೆ ಶಿವಕುಮಾರ್

ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರಿಗೆ ತೀವ್ರ ಮುಖಭಂಗವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಬೆಂಗಳೂರು: ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರಿಗೆ ತೀವ್ರ ಮುಖಭಂಗವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಹಾನಗಲ್ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಶ್ರೀನಿವಾಸ್ ಮಾನೆಯವರ ಗೆಲುವಿನ ಹುಮ್ಮಸ್ಸಿನಲ್ಲಿ ಮಾತನಾಡಿದ ಅವರು, ಸಿಎಂ ಸೇರಿದಂತೆ ಘಟಾನುಘಟಿ ನಾಯಕರು ಕ್ಷೇತ್ರದಲ್ಲಿ ಬೀಡುಬಿಟ್ಟು ತೀವ್ರ ಪ್ರಚಾರ ಮಾಡಿದ್ದರು. ಕೆಲವು ಸ್ನೇಹಿತರು ಬ್ಯಾಗ್ ಕೂಡ ತೆಗೆದುಕೊಂಡು ಹೋಗಿ ಕೊಟ್ಟರು. ಆದರೂ ಅವರಿಗೆ ಮತದಾರ ಒಲಿಯಲಿಲ್ಲ, ಹಾನಗಲ್ ಕ್ಷೇತ್ರದ ಜನತೆಗೆ ಸೆಲ್ಯೂಟ್ ಹೇಳಬಯಸುತ್ತೇನೆ ಎಂದರು.

ಸಿಂದಗಿ ಕ್ಷೇತ್ರದಲ್ಲಿ ನಾವು ಎರಡನೇ ಸ್ಥಾನಕ್ಕೆ ಬಂದಿದ್ದು ಫಲಿತಾಂಶ ಸಮಾಧಾನ ತಂದಿದೆ. ಅಲ್ಲಿಯೂ ಗೆಲ್ಲುವ ವಿಶ್ವಾಸ ನನಗಿತ್ತು, ಕಳೆದ ಬಾರಿಯ ಚುನಾವಣೆಗೆ ಹೋಲಿಸಿದರೆ ಈ ಬಾರಿ ಜನ ಕಾಂಗ್ರೆಸ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ, ಸಮಾಧಾನ ತಂದಿದೆ. ಒಟ್ಟಾರೆ ಫಲಿತಾಂಶ ನೋಡಿದರೆ ರಾಜ್ಯದ ಜನತೆ ಬಿಜೆಪಿ ಆಡಳಿತದಿಂದ ಬದಲಾವಣೆ ಬಯಸುತ್ತಿದ್ದಾರೆ. ಮತದಾರರು ಬಿಜೆಪಿ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದರು.

ಮತದಾರ ಕಾಂಗ್ರೆಸ್ ಕಡೆ ಒಲವು ವ್ಯಕ್ತಪಡಿಸುತ್ತಿದ್ದಾರೆ. ಜನರ ನಂಬಿಕೆ, ವಿಶ್ವಾಸವನ್ನು ಉಳಿಸಿಕೊಳ್ಳುತ್ತೇವೆ ಎಂದರು. 
ಹಾನಗಲ್ ಕ್ಷೇತ್ರದ ಗೆಲುವಿಗೆ ಸರ್ಕಾರ ಜೊತೆಗೆ ಏನೇನು ಕೂರಿಸಿಕೊಂಡಿದ್ದರು. ಆದರೆ ಹಾನಗಲ್ ಕ್ಷೇತ್ರದ ಜನರು ಸ್ವಾಭಿಮಾನ ಮತದಾರರು, ಈ ಫಲಿತಾಂಶ ಇಡೀ ಬಿಜೆಪಿಗೆ ಮುಖಭಂಗ. ಕೆಲವರು ವೈಯಕ್ತಿಕ ಅಜೆಂಡಾ ಇಟ್ಟುಕೊಂಡಿರುತ್ತಾರೆ, ಒಂದೇ ಚೇರ್ ಇಟ್ಟುಕೊಂಡು ಸಂಗೀತ ಖುರ್ಚಿ ಆಡುತ್ತಿರುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT