ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ಪಕ್ಷ ಸಂಘಟನೆಯ ಕೊರತೆಯೇ ಜೆಡಿಎಸ್ ಸೋಲಿಗೆ ಕಾರಣ: ಹೆಚ್ ಡಿ ಕುಮಾರಸ್ವಾಮಿ

ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕಾರ್ಯಕರ್ತರ ಒತ್ತಾಸೆ ಮೇರೆಗೆ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಿದ್ದೆವು ಹೊರತು ನಮಗೆ ಈ ಫಲಿತಾಂಶದ ಬಗ್ಗೆ ತಿಳಿದಿತ್ತು ಎಂದು ಹೇಳಿದ್ದಾರೆ.

ಕೇತಗಾನಹಳ್ಳಿ(ರಾಮನಗರ): ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕಾರ್ಯಕರ್ತರ ಒತ್ತಾಸೆ ಮೇರೆಗೆ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಿದ್ದೆವು ಹೊರತು ನಮಗೆ ಈ ಫಲಿತಾಂಶದ ಬಗ್ಗೆ ತಿಳಿದಿತ್ತು ಎಂದು ಹೇಳಿದ್ದಾರೆ.

ಇಂದು ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ಮಾತನಾಡಿರುವ ಅವರು, ಹಾನಗಲ್ ಕ್ಷೇತ್ರದಲ್ಲಿ ನಮಗೆ ತಳಹದಿಯೇ ಇಲ್ಲ, ಹೀಗಿರುವಾಗ ಅಲ್ಲಿನ ಫಲಿತಾಂಶದ ಬಗ್ಗೆ ಹೆಚ್ಚು ನಿರೀಕ್ಷೆಯಿರಲಿಲ್ಲ, ಉಪ ಚುನಾವಣೆಗೆ ನಾನು ಹೆಚ್ಚು ಒತ್ತು ನೀಡುವುದಿಲ್ಲ ಎಂದರು. ಆದರೆ ಸಿಂದಗಿಯಲ್ಲಿ ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ, ಪಕ್ಷ ಸಂಘಟನೆಯ ಕೊರತೆಯೇ ನಮ್ಮ ಸೋಲಿಗೆ ಕಾರಣ ಎಂದು ವಿಶ್ಲೇಷಿಸಿದರು.

ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ 4 ಸಾವಿರದ 353 ಮತಗಳು, ಹಾನಗಲ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಹಾನಗಲ್ ನಲ್ಲಿ ಇದುವರೆಗೆ ಜೆಡಿಎಸ್ ಅಭ್ಯರ್ಥಿ ಕೇವಲ 629 ಮತಗಳನ್ನು ಗಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT