ಸಿದ್ದರಾಮಯ್ಯ 
ರಾಜಕೀಯ

ಬಿಟ್ ಕಾಯಿನ್ ಹಗರಣದಲ್ಲಿರುವ ರಾಜಕೀಯ ನಾಯಕರ ಹೆಸರು ಬಹಿರಂಗಪಡಿಸಿ: ಸಿದ್ದರಾಮಯ್ಯ

ಬಿಟ್ ಕಾಯಿನ್ ಹಗರಣದಲ್ಲಿರುವ ರಾಜಕೀಯ ನಾಯಕರ ಹೆಸರನ್ನು ಸಾರ್ವಜನಿಕರಿಗೆ ತಿಳಿಸಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಂಗಳವಾರ ಆಗ್ರಹಿಸಿದ್ದಾರೆ.

ಬೆಂಗಳೂರು: ಬಿಟ್ ಕಾಯಿನ್ ಹಗರಣದಲ್ಲಿರುವ ರಾಜಕೀಯ ನಾಯಕರ ಹೆಸರನ್ನು ಸಾರ್ವಜನಿಕರಿಗೆ ತಿಳಿಸಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಂಗಳವಾರ ಆಗ್ರಹಿಸಿದ್ದಾರೆ.

ಹಗರಣ ಕುರಿತು ಮಾತನಾಡಿರುವ ಅರು, ಕಾಂಗ್ರೆಸ್ ಆಗಲೀ ಅಥವಾ ಬಿಜೆಪಿಯೇ ಆಗಲಿ, ಹಗರಣದಲ್ಲಿ ಭಾಗಿಯಾಗಿರುವ ಯಾವುದೇ ರಾಜಕೀಯ ನಾಯಕರಾದರೂ ಅವರ ಹೆಸರನ್ನು ಬಹಿರಂಗಪಡಿಸಿ. ಜನರಿಗೂ ಸತ್ಯಾಸತ್ಯತೆಗಳು ತಿಳಿಯಲಿ ಎಂದು ಆಗ್ರಹಿಸಿದ್ದಾರೆ.

ಬಿಟ್ ಕಾಯಿನ್ ಹಗರಣದ ಬಗ್ಗೆ ರಾಜ್ಯದ ತನಿಖಾ ಸಂಸ್ಥೆಗಳು ಸಮಗ್ರ ತನಿಖೆ ನಡೆಸಿವೆ. ಆದರೂ ಸರ್ಕಾರವೇ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐಗೆ ಇದೇ ಪ್ರಕರಣದ ತನಿಖೆಯ ಹೊಣೆಯನ್ನು ವಹಿಸಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಸಮಗ್ರ ತನಿಖೆ ನಡೆಸಿದ್ದರೆ ಹೆಚ್ಚಿನ ತನಿಖೆಗೆ ಇಡಿ ಮತ್ತು ಸಿಬಿಐಗೆ ಒಪ್ಪಿಸುವ ಅನಿವಾರ್ಯತೆ ಯಾಕೆ ಬಂತು?’ ಎಂದು ಪ್ರಶ್ನಿಸಿದ್ದಾರೆ.

‘ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಪತ್ರಿಕಾ ವರದಿಗಳನ್ನು ಗಮನಿಸಿದರೆ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ.  ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದವರ ವಿರುದ್ದ ಆರೋಪ ಮಾಡಲು ಹೋಗದೆ, ತನಿಖೆಯ ಪೂರ್ಣ ವಿವರವನ್ನು ಸಾರ್ವಜನಿಕರ ಮುಂದಿಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ 5000 ಬಿಟ್ ಕಾಯಿನ್ ದೊಚಿದ್ದನೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಕದ್ದ ಆ ಬಿಟ್ ಕಾಯಿನ್ ಎಲ್ಲಿದೆ? ಅದನ್ನು ಜಪ್ತಿ ಮಾಡಲಾಗಿದೆಯೇ? ಇಲ್ಲವೇ ಅವು ಇನ್ನೂ ಪತ್ತೆಯಾಗಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT