ಡಿಕೆ.ಶಿವಕುಮಾರ್ 
ರಾಜಕೀಯ

ಬೊಮ್ಮಾಯಿ ಸರ್ಕಾರಕ್ಕೆ ತವರು ಜಿಲ್ಲೆಯ ಭರ್ಜರಿ ಉಡುಗೊರೆ: ಡಿಕೆಶಿ

100 ದಿನಗಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ತವರು ಜಿಲ್ಲೆ ಹಾನಗಲ್ ಕ್ಷೇತ್ರದ ಮತದಾರರು ಭರ್ಜರಿ ಉಡುಗೊರೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೂದಲಿಸಿದ್ದಾರೆ.

ಬೆಂಗಳೂರು: 100 ದಿನಗಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ತವರು ಜಿಲ್ಲೆ ಹಾನಗಲ್ ಕ್ಷೇತ್ರದ ಮತದಾರರು ಭರ್ಜರಿ ಉಡುಗೊರೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೂದಲಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಗಳ ಪಾಲಿಗೆ ಮತದಾರನೇ ಯಜಮಾನ ಎಂಬುದನ್ನು ಎರಡು ಉಪಚುನಾವಣೆಗಳ ಫಲಿತಾಂಶ ಸಾಬೀತುಪಡಿಸಿದೆ ಎಂದು ಹೇಳಿದರು.

ಉಪಚುನಾವಣೆಯ ಫಲಿತಾಂಶ ಬರುತ್ತಿದ್ದಂತೆಯೇ ಸರ್ಕಾರಗಳು ಹೇಗೆ ಹೆದರಿಕೊಂಡು ನೀತಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತವೆ ಎಂಬುದಕ್ಕೆ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಿರುವುದೇ ಸಾಕ್ಷಿ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ 100 ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನೆ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಒಳ್ಳೆಯ ಜಾಹೀರಾತು ನೀಡಲಿ. ಅವರ ಸಾಧನೆ ನೋಡಿ ಅವರದೇ ಜಿಲ್ಲೆ ಜನ ಉಪಚುನಾವಣೆಯಲ್ಲಿ ತೀರ್ಪು ಕೊಟ್ಟಿದ್ದಾರೆ. ಅವರ ಸಾಧನೆ ಬಗ್ಗೆ ನಮ್ಮ ತಕರಾರು ಏನೂ ಇಲ್ಲ. ನಾವು ಅವರ ಆಡಳಿತದ ಬಗ್ಗೆ ದೂರುತ್ತಿಲ್ಲ. ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿಲ್ಲ. ಅವರ ನಾಯಕತ್ವದಲ್ಲಿಯೇ ಚುನಾವಣೆ ಮಾಡಬೇಕು ಎಂದು ಅವರ ಪಕ್ಷದ ನಾಯಕರೇ ಹೇಳಿದ್ದಾರೆ. ಅದು ಅವರ ಇಚ್ಛೆ' ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!