ಡಿಕೆ.ಶಿವಕುಮಾರ್ 
ರಾಜಕೀಯ

ಬೊಮ್ಮಾಯಿ ಸರ್ಕಾರಕ್ಕೆ ತವರು ಜಿಲ್ಲೆಯ ಭರ್ಜರಿ ಉಡುಗೊರೆ: ಡಿಕೆಶಿ

100 ದಿನಗಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ತವರು ಜಿಲ್ಲೆ ಹಾನಗಲ್ ಕ್ಷೇತ್ರದ ಮತದಾರರು ಭರ್ಜರಿ ಉಡುಗೊರೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೂದಲಿಸಿದ್ದಾರೆ.

ಬೆಂಗಳೂರು: 100 ದಿನಗಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ತವರು ಜಿಲ್ಲೆ ಹಾನಗಲ್ ಕ್ಷೇತ್ರದ ಮತದಾರರು ಭರ್ಜರಿ ಉಡುಗೊರೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೂದಲಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಗಳ ಪಾಲಿಗೆ ಮತದಾರನೇ ಯಜಮಾನ ಎಂಬುದನ್ನು ಎರಡು ಉಪಚುನಾವಣೆಗಳ ಫಲಿತಾಂಶ ಸಾಬೀತುಪಡಿಸಿದೆ ಎಂದು ಹೇಳಿದರು.

ಉಪಚುನಾವಣೆಯ ಫಲಿತಾಂಶ ಬರುತ್ತಿದ್ದಂತೆಯೇ ಸರ್ಕಾರಗಳು ಹೇಗೆ ಹೆದರಿಕೊಂಡು ನೀತಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತವೆ ಎಂಬುದಕ್ಕೆ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಿರುವುದೇ ಸಾಕ್ಷಿ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ 100 ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನೆ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಒಳ್ಳೆಯ ಜಾಹೀರಾತು ನೀಡಲಿ. ಅವರ ಸಾಧನೆ ನೋಡಿ ಅವರದೇ ಜಿಲ್ಲೆ ಜನ ಉಪಚುನಾವಣೆಯಲ್ಲಿ ತೀರ್ಪು ಕೊಟ್ಟಿದ್ದಾರೆ. ಅವರ ಸಾಧನೆ ಬಗ್ಗೆ ನಮ್ಮ ತಕರಾರು ಏನೂ ಇಲ್ಲ. ನಾವು ಅವರ ಆಡಳಿತದ ಬಗ್ಗೆ ದೂರುತ್ತಿಲ್ಲ. ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿಲ್ಲ. ಅವರ ನಾಯಕತ್ವದಲ್ಲಿಯೇ ಚುನಾವಣೆ ಮಾಡಬೇಕು ಎಂದು ಅವರ ಪಕ್ಷದ ನಾಯಕರೇ ಹೇಳಿದ್ದಾರೆ. ಅದು ಅವರ ಇಚ್ಛೆ' ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT