ಸಾಂದರ್ಭಿಕ ಚಿತ್ರ 
ರಾಜಕೀಯ

ಉಪಚುನಾವಣೆ ಫಲಿತಾಂಶ ಎಫೆಕ್ಟ್: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ನಿರಾಸಕ್ತಿ!

ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  ಯಾವುದೇ ಚುನಾವಣೆ ನಡೆಸಲು ಆಸಕ್ತಿ ತೋರುತ್ತಿಲ್ಲ.

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  ಯಾವುದೇ ಚುನಾವಣೆ ನಡೆಸಲು ಆಸಕ್ತಿ ತೋರುತ್ತಿಲ್ಲ.

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದೂಡಲು ಯತ್ನಿಸುತ್ತಿದೆ.  ಆಡಳಿತಾಧಿಕಾರಿಗಳ ಅವಧಿಯನ್ನು ಇನ್ನೂ ಆರು ತಿಂಗಳಿಗೆ ವಿಸ್ತರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ.

ಉಪ ಚುನಾವಣೆ ಫಲಿತಾಂಶ  ಹೊರಬಿದ್ದ ನಂತರ ಸರ್ಕಾರ ಚುನಾವಣೆ ನಡೆಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ನಿರಾಸಕ್ತಿ ತೋರುತ್ತಿರುವುದು ಇದೇ ಮೊದಲಲ್ಲ,  ಈ ಹಿಂದೆ ತಾಲ್ಲೂಕು ಪಂಚಾಯತಿಗಳನ್ನು ರದ್ದುಪಡಿಸಿ ಜಿಲ್ಲಾ ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಎರಡು ಹಂತದ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಅದು ಪ್ರಸ್ತಾಪಿಸಿತ್ತು, ಇದರಿಂದ ಗ್ರಾಮೀಣ ಆಡಳಿತವನ್ನು ಸುಗಮಗೊಳಿಸಲು ಸಹಾಯವಾಗುವುದಾಗಿ ಸರ್ಕಾರ ತಿಳಿಸಿತ್ತು ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಮೇ ತಿಂಗಳಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು, ಆದರೆ ಸಾಂಕ್ರಾಮಿಕ ರೋಗದಿಂದಾಗಿ  ಸೆಪ್ಟೆಂಬರ್‌ಗೆ ಮುಂದೂಡಲಾಯಿತು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ 2021 ವಿಧಾನಮಂಡಲದ ಅಧಿವೇಶನದಲ್ಲಿ ಅಂಗೀಕರಿಸಿ,  ಸ್ಥಳೀಯ ಸಂಸ್ಥೆಗಳಿಗೆ ಡಿಲಿಮಿಟೇಶನ್ ಮತ್ತು ಮೀಸಲಾತಿ ನಿರ್ಧರಿಸಲು ಅವಕಾಶ ನೀಡಿತು.
 
ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಸಹ ಮುಂದೂಡಲು ಯತ್ನಿಸುತ್ತಿದೆ.  ಡಿಲಿಮಿಟೇಶನ್ ಇಲ್ಲದೇ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗ ಸೆಪ್ಟಂಬರ್ ನಲ್ಲಿ ನ್ಯಾಯಾಲಯಕ್ಕೆ ಮತ್ತೊಂದು ಅರ್ಜಿ ಸಲ್ಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!