ಸಿಎಂ ಬೊಮ್ಮಾಯಿ 
ರಾಜಕೀಯ

ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ- ಆರ್'ಎಸ್ಎಸ್ ನಾಯಕರ ಭೇಟಿ

ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರ್'ಎಸ್ಎಸ್ ನಾಯಕರ ನಡುವಿನ ಭೇಟಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಬೆಂಗಳೂರು; ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರ್'ಎಸ್ಎಸ್ ನಾಯಕರ ನಡುವಿನ ಭೇಟಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಮುಖ್ಯಮಂತ್ರಿಯ ಸರ್ಕಾರಿ ನಿವಾಸಕ್ಕೆ ನಿನ್ನೆ ಬೆಳಿಗ್ಗೆ ಆರೆಸ್ಸೆಸ್‌ ಸಹ ಸರಕಾರ್ಯವಾಹ ಮುಕುಂದ ಸಿ.ಆರ್‌ ಅವರು ಭೇಟಿ ಮಾಡಿದ್ದು, ಕೆಲಕಾಲ ಮಾತುಕತೆ ನಡೆಸಿದರು. ಇಬ್ಬರ ಈ ಭೇಟಿ ಇದೀಗ ಬಿಜೆಪಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಧಾರವಾಡದಲ್ಲಿ ಇತ್ತೀಚೆಗೆ ಆರೆಸ್ಸೆಸ್ಸ್ ರಾಷ್ಟ್ರೀಯ ಕಾರ್ಯಕಾರಿ ಬೈಠಕ್‌ನಲ್ಲಿ ನಡೆದಿತ್ತು. ಬಳಿಕ, ಮುಕುಂದ ಅವರು ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.

ಬಿಟ್‌ ಕಾಯಿನ್‌ ಹಗರಣ, ಈ ಹಗರಣದಲ್ಲಿ ಪ್ರಭಾವಿಗಳು, ಪ್ರಭಾವಿಗಳ ಮಕ್ಕಳು ಭಾಗಿಯಾಗಿದ್ದಾರೆಂಬ ಕಾಂಗ್ರೆಸ್‌ ಆರೋಪ, ಪ್ರಕರಣದ ಕುರಿತು ಜಾರಿ ನಿರ್ದೇಶನಾಲಯಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ ಎಂಬ ಮುಖ್ಯಮಂತ್ರಿ ಹೇಳಿಕೆ ನಡುವೆಯೇ ನಡೆದ ಭೇಟಿ ರಾಜಕೀಯವಾಗಿಯೂ ಕುತೂಹಲ ಮೂಡಿಸಿದೆ.

ಉಪಹಾರ ಸೇವನೆಯ ಜೊತೆಗೆ ಇಬ್ಬರೂ 20 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಉಪ ಚುನಾವಣೆಯ ಫಲಿತಾಂಶವೂ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಇಬ್ಬರೂ ಚರ್ಚೆ ನಡೆಸಿದರು ಎಂದು ಮುಖ್ಯಮಂತ್ರಿಯ ಆಪ್ತ ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT