ಸಿದ್ದರಾಮಯ್ಯಮತ್ತು ಜಿ.ಟಿ ದೇವೇಗೌಡ 
ರಾಜಕೀಯ

ಚುನಾವಣೆಯಲ್ಲಿ ಸೋತರೂ ಜನ ಪ್ರೀತಿಸುವಂತಹ ನಾಯಕ: ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಜಿ.ಟಿ. ದೇವೇಗೌಡ!

 ಶಾಸಕ ಜಿ.ಟಿ.ದೇವೇಗೌಡ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಕೀಯ ವೈರತ್ವ ಮರೆತು ನಗರದಲ್ಲಿ ಮಂಗಳವಾರ ಎರಡು ಕಾರ್ಯಕ್ರಮಗಳಲ್ಲಿ ವೇದಿಕೆಯನ್ನು ಹಂಚಿಕೊಂಡು, ಸೌಹಾರ್ದ ಪ್ರದರ್ಶಿಸಿ ಅಚ್ಚರಿ ಮೂಡಿಸಿದರು.

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಕೀಯ ವೈರತ್ವ ಮರೆತು ನಗರದಲ್ಲಿ ಮಂಗಳವಾರ ಎರಡು ಕಾರ್ಯಕ್ರಮಗಳಲ್ಲಿ ವೇದಿಕೆಯನ್ನು ಹಂಚಿಕೊಂಡು, ಸೌಹಾರ್ದ ಪ್ರದರ್ಶಿಸಿ ಅಚ್ಚರಿ ಮೂಡಿಸಿದರು.

ಪರಸ್ಪರ ಹೊಗಳಿದರು. ಹಿನಕಲ್ ಹಾಗೂ ಕೇರ್ಗಳ್ಳಿಯಲ್ಲಿ ನಡೆದ ಕಾರ್ಯಕ್ರಮ ಈ ಅಪರೂಪದ ಸಮಾಗಮಕ್ಕೆ ಸಾಕ್ಷಿಯಾಯಿತು. ಡಾ.ಎಚ್.ಸಿ.ಮಹದೇವಪ್ಪ ಅವರಂತಹ ದಲಿತ ನಾಯಕರನ್ನು ಬೆಳೆಸಿದ್ದೇ ಸಿದ್ದರಾಮಯ್ಯ. ವೀರಶೈವ ಸಮಾಜದ ಮುಖಂಡರನ್ನೂ ಬೆಳೆಸಿದ್ದಾರೆ. ಚುನಾವಣೆಯಲ್ಲಿ ಸೋತರೂ ಜನ ಪ್ರೀತಿಸುವಂತಹ ನಾಯಕ ಅವರು’ ಎಂದು ದೇವೇಗೌಡರು ಶ್ಲಾಘಿಸಿದರು.

‘ಜಿ.ಟಿ.ದೇವೇಗೌಡರನ್ನು ಜೆಡಿಎಸ್‌ನಲ್ಲೇ ಉಳಿಸಿಕೊಳ್ಳಲು ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ಯತ್ನಿಸಿದ್ದಾರೆ. ಆದರೂ ಅವರು ಬರುವುದಾದರೆ ಸ್ವಾಗತ’ ಎಂದು ಆಹ್ವಾನವಿತ್ತ ಸಿದ್ದರಾಮಯ್ಯ, ‘ಜಿ.ಟಿ. ಕೇಳ್ತಾ ಇದ್ದೀಯೇನಪ್ಪಾ’ ಎಂದು ಆತ್ಮೀಯತೆ ತೋರಿದರು.

ಅದಕ್ಕೂ ಮುಂಚೆ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ‘ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ ಅಕ್ಕ–ಪಕ್ಕ ಕುಳಿತಿದ್ದಾರೆ ಹೊಡಿರಿ ಚಪ್ಪಾಳೆ’ ಎಂದು ಹೇಳಿ ಕಾರ್ಯಕರ್ತರಲ್ಲಿ ಹುರುಪು ತುಂಬಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ; ಸುಳ್ಳೇ ಬಿಜೆಪಿ ಮನೆ ದೇವರು: CM DK Shivakumar

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ರಕ್ಷಾ ಬಂಧನ: ವಿರಾಟ್ ಕೊಹ್ಲಿ ಸಹೋದರಿಯ ಪೋಸ್ಟ್; ಫೋಟೋ ವೈರಲ್!