ಶಿವರಾಜ್ ತಂಗಡಗಿ(ಸಂಗ್ರಹ ಚಿತ್ರ) 
ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ನೂರಕ್ಕೆ ನೂರರಷ್ಟು ಸತ್ಯ; ಬಿಜೆಪಿಯಲ್ಲಿ ಇನ್ನೂ ಇಬ್ಬರು ಸಿಎಂ ಆಗುತ್ತಾರೆ: ಶಿವರಾಜ್ ತಂಗಡಗಿ

ಜನವರಿ ಅಂತ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕಾರ ಹೋಗುತ್ತದೆ, ಈ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಸಿಕ್ಕಿದೆ. ಇನ್ನು ಒಂದೂವರೆ ವರ್ಷದಲ್ಲಿ ರಾಜ್ಯಕ್ಕೆ ಇಬ್ಬರು ಸಿಂ ಆಗುತ್ತಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಶಿವರಾಜ್ ತಂಗಡಗಿ ಬಾಂಬ್ ಸಿಡಿಸಿದ್ದಾರೆ.

ಕೊಪ್ಪಳ: ಜನವರಿ ಅಂತ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕಾರ ಹೋಗುತ್ತದೆ, ಈ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಸಿಕ್ಕಿದೆ. ಇನ್ನು ಒಂದೂವರೆ ವರ್ಷದಲ್ಲಿ ರಾಜ್ಯಕ್ಕೆ ಇಬ್ಬರು ಸಿಂ ಆಗುತ್ತಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಶಿವರಾಜ್ ತಂಗಡಗಿ ಬಾಂಬ್ ಸಿಡಿಸಿದ್ದಾರೆ.

ನಿನ್ನೆ ಕಲಬುರಗಿಯಲ್ಲಿ ಮಾತನಾಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಬಿಟ್ ಕಾಯಿನ್ ಹಗರಣ ಬಗ್ಗೆ ಸಮಗ್ರವಾಗಿ ಪಾರದರ್ಶಕವಾಗಿ ತನಿಖೆಯಾದರೆ ಸಿಎಂ ಪದವಿ ಕಳೆದುಕೊಳ್ಳುತ್ತಾರೆ, ಇದರಲ್ಲಿ ಹಲವು ಬಿಜೆಪಿ ನಾಯಕರು, ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದರು.

ಇದೀಗ ಅದೇ ಧಾಟಿಯಲ್ಲಿ ಶಿವರಾಜ್ ತಂಗಡಗಿ ಕೂಡ ಮಾತನಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ನೂರಕ್ಕೆ ನೂರು ಸತ್ಯ, ಇನ್ನು ಒಂದೂವರೆ ವರ್ಷದ ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳಾಗುತ್ತಾರೆ. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮೂವರು ಮುಖ್ಯಮಂತ್ರಿಯಾಗಿದ್ದರು. ಅವರಿಗೆ ಸಿಂಗಲ್ ಆಗಿ ಆಡಳಿತ ಮಾಡಲು ಆಗುವುದೇ ಇಲ್ಲ, ಅಷ್ಟು ಸಾಮರ್ಥ್ಯ ಬಿಜೆಪಿ ನಾಯಕರಿಗಿಲ್ಲ ಎಂದರು.

ಬಿಟ್ ಕಾಯಿನ್ ದಂಧೆ ಬಗ್ಗೆ ಮಾತನಾಡಿದರೆ, ಆರೋಪ ಮಾಡಿದರೆ ಸಾಕ್ಷ್ಯಾಧಾರ ಕೊಡಿ, ದಾಖಲೆ ಪ್ರತಿ ಕೊಡಿ ಎಂದು ಕೇಳುತ್ತಾರೆ, ಆರೋಪ ಮಾಡುವವರು ದಾಖಲೆ ಕೊಡಬೇಕೆಂದರೆ ಸರ್ಕಾರವೇಕೆ, ತನಿಖಾ ಸಂಸ್ಥೆಗಳಿರುವುದೇಕೆ ಎಂದು ತಂಗಡಗಿ ಪ್ರಶ್ನಿಸಿದರು.

ಬಿಟ್ ಕಾಯಿನ್ ಬಗ್ಗೆ ಅಧಿವೇಶನದಲ್ಲಿ ಚರ್ಚೆ: ಮುಂಬರುವ ಚಳಿಗಾಲ ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಟ್ ಕಾಯಿನ್ ಹಗರಣವನ್ನು ಸದನದಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT