ಸಿದ್ದರಾಮಯ್ಯ, ಪ್ರತಾಪ್ ಸಿಂಹ(ಸಂಗ್ರಹ ಚಿತ್ರ) 
ರಾಜಕೀಯ

ಮಹಾನ್ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯನವರೇ ಬಿಟ್ ಕಾಯಿನ್ ವಹಿವಾಟಿನ ಬಗ್ಗೆ ತಿಳಿಸಿಕೊಡಲಿ: ಪ್ರತಾಪ ಸಿಂಹ

ಬಿಟ್ ಕಾಯಿನ್ ಅವ್ಯವಹಾರ ಕೇಸು ರಾಜ್ಯದಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರ ಮಧ್ಯೆ ತೀವ್ರ ವಾಕ್ಸಮರ ಮತ್ತು ಪರಸ್ಪರ ಕೆಸರೆರಚಾಟಕ್ಕೆ ವಿಷಯವಾಗಿದೆ.

ಮೈಸೂರು: ಬಿಟ್ ಕಾಯಿನ್ ಅವ್ಯವಹಾರ ಕೇಸು ರಾಜ್ಯದಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರ ಮಧ್ಯೆ ತೀವ್ರ ವಾಕ್ಸಮರ ಮತ್ತು ಪರಸ್ಪರ ಕೆಸರೆರಚಾಟಕ್ಕೆ ವಿಷಯವಾಗಿದೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಮತ್ತು ಹಣಕಾಸು ಸಚಿವರಾಗಿದ್ದಾಗ ಹದಿಮೂರು ಬಾರಿ ಬಜೆಟ್ ಮಂಡಿಸಿದ್ದರು. ರಾಜ್ಯ ಬಜೆಟ್​ ಮಂಡಿಸಿರುವ ಹಿರಿಯ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ ಅವರು,  ಅವರೇ ಬಿಟ್ ಕಾಯಿನ್ ಅಂದ್ರೇನು, ಅದರ ವ್ಯವಹಾರ ಹೇಗೆ ನಡೆಯುತ್ತೆ, ವಹಿವಾಟು ಕ್ರಮ ಹೇಗೆ, ಎಜೆನ್ಸಿ ಎಲ್ಲಿದೆ ಎಂಂಬುದನ್ನು ತಿಳಿಸಿಕೊಡಲಿ ಎಂದು ಸವಾಲು ಹಾಕಿದ್ದಾರೆ.

ಬಿಟ್‌ ಕಾಯಿನ್ ಹಗರಣದ ಚಾರ್ಜ್‌ಶೀಟ್‌ನಲ್ಲಿ ಕಾಂಗ್ರೆಸ್ ನಾಯಕರ ಮಕ್ಕಳ ಹೆಸರು ಉಲ್ಲೇಖವಾಗಿದೆ. ಬಿಜೆಪಿ ವಿರುದ್ಧ ಆರೋಪಿಸಿ ಕಾಂಗ್ರೆಸ್‌ನವರೇಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ? ಅವರಿವರ ಹೆಸರನ್ನು ಯಾಕೆ ತೇಲಿ ಬಿಡುತ್ತಿದ್ದೀರಾ? ಬಿಟ್ ಕಾಯಿನ್ ಅಂದ್ರೇನು, ಅದರ ವ್ಯವಹಾರ ಹೇಗೆ? ಇದರ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿವರಿಸಲಿ. ಅಷ್ಟಕ್ಕೂ ಬಿಟ್ ಕಾಯಿನ್ ಅವ್ಯವಹಾರ ನಡೆದಿದ್ದು ಈಗಿನ ಬೊಮ್ಮಾಯಿ ಸರ್ಕಾರದಲ್ಲಿ ಅಲ್ಲ, ಹಿಂದಿನ ಸಿದ್ದರಾಮಯ್ಯ ಸರ್ಕಾರವಿರುವಾಗ ಎಂದರು.

ಬೊಮ್ಮಾಯಿ 2023ಕ್ಕೂ ಮುಖ್ಯಮಂತ್ರಿ ಆಗೋದು ಖಚಿತ. ಬೊಮ್ಮಾಯಿ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ. ಮೊದಲು ಈ ರೀತಿ ತಂತ್ರಗಾರಿಕೆಯನ್ನ ಮಾಡೋದು ಬಿಡಿ ಎಂದರು.

ಬಿಟ್ ಕಾಯಿನ್ ಪ್ರಕರಣ ಕಾಂಗ್ರೆಸ್ ಕೊರಳು ಸುತ್ತಿಕೊಳ್ಳುತ್ತದೆ: ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮಾಧ್ಯಮಗಳ ಮೂಲಕ ನಿರೀಕ್ಷಣಾ ಜಾಮೀನು ಹಾಕುತ್ತಿದೆ. ಪ್ರಕರಣವನ್ನು ಗಂಭೀರವಾಗಿ ತನಿಖೆ ಮಾಡಿದರೆ ಕಾಂಗ್ರೆಸ್ ನವರೇ ಇದರಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ಚಾರ್ಚ್ ಶೀಟ್ ನಲ್ಲಿ ಕಾಂಗ್ರೆಸ್ ಮುಖಂಡರ ಮಕ್ಕಳ ಹೆಸರು ಉಲ್ಲೇಖವಾಗಿದೆ. ಹೀಗಾಗಿ ಕಾಂಗ್ರೆಸ್ ನವರಿಗೆ ಭಯ ಉಂಟಾಗಿ ನಿರೀಕ್ಷಣಾ ಜಾಮೀನು ಹಾಕುತ್ತಿದ್ದಾರೆ ಎಂದು ಟೀಕಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT