ಸಾಂದರ್ಭಿಕ ಚಿತ್ರ 
ರಾಜಕೀಯ

ಬಿಟ್ ಕಾಯಿನ್ ಆರೋಪಿಗೆ ನಲಪಾಡ್, ದರ್ಶನ್ ಲಮಾಣಿ ಸಂಪರ್ಕ: ತಮ್ಮ ತಪ್ಪನ್ನು ಬಿಜೆಪಿ ತಲೆಗೆ ಕಟ್ಟುವ ಚಾಳಿ ಕಾಂಗ್ರೆಸ್ ಗೆ!

ಬಿಟ್ ಕಾಯಿನ್ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ, ಆರೋಪಿ ಶ್ರೀ ಕೃಷ್ಣನನ್ನು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ಬಿಟ್ ಕಾಯಿನ್ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ, ಆರೋಪಿ ಶ್ರೀ ಕೃಷ್ಣನನ್ನು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಇದೇ ವೇಳೆ ಸಿದ್ದರಾಮಯ್ಯ ಅವಧಿಯಲ್ಲಿಯೇ ಬಿಟ್‌ ಕಾಯಿನ್‌ ದಂಧೆಯ ಆರೋಪಿ ಶ್ರೀಕಿಯನ್ನು ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು ಎಂದು ಬಿಜೆಪಿ ಆರೋಪಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ,  ಸಿದ್ದರಾಮಯ್ಯ ಅವಧಿಯಲ್ಲಿಯೇ ಆರೋಪಿಯನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು.  ಈಗ ಅದೇ ಸಿದ್ದರಾಮಯ್ಯ ಈಗ  ಬಿಟ್ ಕಾಯಿನ್ ಆರೋಪಿಗೆ ಕಾಂಗ್ರೆಸ್‌ ನಾಯಕರ ಜೊತೆ ಇರುವ ಸಂಬಂಧವನ್ನು ಉಲ್ಲೇಖ ಮಾಡದೆ, ಬಿಜೆಪಿ ವಿರುದ್ಧ ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ ಎಂದು ಹೇಳಿದೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಿಟ್ ಕಾಯಿನ್ ದಂಧೆ ನಡೆದಿದೆ. ಈ ದಂಧೆಯ ಆರೋಪಿಯು ಯುವ ಕಾಂಗ್ರೆಸ್‌ ನಿಯೋಜಿತ ಅಧ್ಯಕ್ಷ ಮಹಮ್ಮದ್‌ ನಲಪಾಡ್‌ ಹಾಗೂ ಮಾಜಿ ಸಚಿವ ಲಮಾಣಿ ಪುತ್ರ ದರ್ಶನ್‌ ನಡುವೆ‌ ಅವ್ಯವಹಾರ ನಡೆಸಿರುವ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಲಾದ ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖವಿದೆ.

ತಾವು ಮಾಡಿದ ತಪ್ಪುಗಳನ್ನು ಬಿಜೆಪಿಯ ತಲೆಗೆ ಕಟ್ಟುವ ಚಾಳಿ ಕಾಂಗ್ರೆಸ್ ಪಕ್ಷ ಹೊಂದಿದೆ. ರಫೇಲ್ ಯುದ್ಧ ವಿಮಾನ ಖರೀದಿಗೆ ಲಂಚ ಬಯಸಿದ್ದ ಕಾಂಗ್ರೆಸ್ ನಾಯಕರು ನಂತರ ಬಿಜೆಪಿ ವಿರುದ್ಧ ಆರೋಪಿಸಿದ್ದರು. ಬಿಟ್ ಕಾಯಿನ್ ವಿಚಾರವೂ ಇದೇ ರೀತಿಯಲ್ಲಿ ಸಾಗುತ್ತಿದೆ. ಬಿಟ್‌ ಕಾಯಿನ್‌ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಜವಾಬ್ದಾರಿಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳಿದ್ದರೆ ಬಹಿರಂಗಪಡಿಸಬೇಕು ಎಂದು ಹೇಳಿದೆ.

ಡಾರ್ಕ್ ನೆಟ್ ಮತ್ತು ಬಿಟ್ ಕಾಯಿನ್ ಜೊತೆ ಡ್ರಗ್ಸ್ ಹಗರಣಕ್ಕೆ ನಂಟಿದೆ ಎಂದು ನಾವು ಮೊದಲೇ ಪ್ರತಿಪಾದಿಸಿದ್ದೆವು. ಡಿಕೆಶಿ ಆಪ್ತ ಮೊಹಮ್ಮದ್ ನಲಪಾಡ್ , ಉಮರ್ ನಲಪಾಡ್ ಬಿಟ್ ಕಾಯಿನ್ ದಂಧೆಯ ಆರೋಪಿಯ ಜೊತೆ ಹೊಂದಿರುವ ನಂಟೇ ಇದಕ್ಕೆ ಸಾಕ್ಷಿ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೇ ಶ್ರೀಕಿ ನಿರಾತಂಕವಾಗಿ ಇದ್ದಿದ್ದಲ್ಲವೇ? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT