ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ರೂ. ಕಳವು: ಸರ್ಕಾರದ ವಿರುದ್ಧ ಎಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರತಿ ಜನಧನ್​ ಖಾತೆಯ ಮೂಲಕ ಒಂದು ಅಥವಾ ಎರಡು ರೂಪಾಯಿ ಕದ್ದಿರುವ ಮಾಹಿತಿಯಿದೆ. ಇದರಲ್ಲಿ ಎರಡೂ ಪಕ್ಷಗಳು ಶಾಮೀಲಾಗಿವೆ. ಇದೊಂದು ಅಂತರರಾಷ್ಟ್ರೀಯ ಮಟ್ಟದ ಹಗರಣ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಯಾರೋ ಮಾಹಿತಿ ನೀಡಿದ್ದಾರೆ. ಅವರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು.

ಜನರಿಗೆ ರಾಜಕಾರಣಿಗಳ ಮೇಲಿನ ವಿಶ್ವಾಸ ಕಡಿಮೆಯಾಗಿದೆ. ಜಾಗತಿಕ ಮಟ್ಟದಲ್ಲಿಯೂ ಭಾರತದ ಮೇಲೆ ವಿಶ್ವಾಸ ಕಡಿಮೆಯಾಗುತ್ತಿದೆ. ಅಭಿವೃದ್ಧಿ ಕಾರ್ಯಗಳ ಕುರಿತ ಚರ್ಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟರು. ಕರ್ನಾಟಕದಲ್ಲಿ ಮೂವರಲ್ಲ ನಾಲ್ವರು ಮುಖ್ಯಮಂತ್ರಿ ಆಗಬಹುದು ಎಂದು ಇದೇ ವೇಳೆ ಮತ್ತೊಂದು ಬಾಂಬ್ ಸಿಡಿಸಿದರು.

ಬಿಟ್​ಕಾಯಿನ್ ಹಗರಣದ ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿದೆ. ಇದು ಹೇಗೆ ಸಾಧ್ಯವಾಯಿತು? ಜಾಮೀನು ಕೊಡಲು ವಾದಿಸಿದ್ದು, ಜಾಮೀನು ಕೊಟ್ಟವರು ಯಾರು? ಬಿಟ್​ಕಾಯಿನ್ ಪ್ರಕರಣದಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ ಚಾರ್ಜ್​​ಶೀಟ್​ ಹಾಕುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಲಭ್ಯವಾಗಿದೆ. ದೊಡ್ಡಮಟ್ಟದಲ್ಲೇ ಈ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಅಷ್ಟು ಸುಲಭವಾಗಿ ಆರೋಪಿಗೆ ಜಾಮೀನು ಹೇಗೆ ಸಿಕ್ಕಿತು? ಸರ್ಕಾರಿ ಅಭಿಯೋಜಕರು ಹೇಗೆ ವಾದ ಮಾಡಿದರು ಎಂದು ಪ್ರಶ್ನಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?