ಜಮೀರ್ ಅಹ್ಮದ್ ಖಾನ್ 
ರಾಜಕೀಯ

ಒಡೆದ ಮನೆಯಾದ ಕಾಂಗ್ರೆಸ್: ಜಮೀರ್ ಫೋಟೋ ಪ್ರದರ್ಶನ! ಡಿಕೆ ಪರ ಘೋಷಣೆ; ಮುಜುಗರದಿಂದ ವೇದಿಕೆ ತೊರೆದ ಸಿದ್ದರಾಮಯ್ಯ

ಪದೇಪದೆ ಡಿಕೆ ಡಿಕೆ ಎಂದು ಕೆಲವರು ಘೋಷಣೆ ಕೂಗುತ್ತಿದ್ದರು. ಇನ್ನು ಕೆಲವರು ಜಮೀರ್ ಫೋಟೋ ಹಿಡಿದು ಘೋಷಣೆ ಹಾಕುತ್ತಿದ್ದರು. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್​ನಲ್ಲಿ ಬಣ ರಾಜಕೀಯ ಮತ್ತೆ ಭುಗಿಲೆದ್ದಿದೆ. ಮಂಗಳವಾರ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಬೆಂಬಲಿಗರು,  ಶಾಂತಿನಗರ ಶಾಸಕ ಎನ್‌ಎ ಹ್ಯಾರೀಸ್  ಅವರನ್ನು ಕಡೆಗಣಿಸಿದ್ದಾರೆ ಎಂದು ಆರೋಪ  ಕೇಳಿ ಬಂದಿದೆ.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಯಾಗಿದೆ.  ಪದೇಪದೆ ಡಿಕೆ ಡಿಕೆ ಎಂದು ಕೆಲವರು ಘೋಷಣೆ ಕೂಗುತ್ತಿದ್ದರು. ಇನ್ನು ಕೆಲವರು ಜಮೀರ್ ಫೋಟೋ ಹಿಡಿದು ಘೋಷಣೆ ಹಾಕುತ್ತಿದ್ದರು. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ.

ಬಳಿಕ ವೇದಿಕೆಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಮಾತನಾಡಬೇಕಾದರೆ ನೀವು ಕೂಗುತ್ತೀರಿ. ನೀವು ಕಾಂಗ್ರೆಸ್ ದ್ರೋಹಿಗಳೆಂದು ಡಿಕೆ ಶಿವಕುಮಾರ್ ಗರಂ ಆದರು.

ಇನ್ನೂ ಶಾಸಕ ಹ್ಯಾರಿಸ್ ಮಾತನಾಡಿ ಖರ್ಗೆ ಮತ್ತು ಶಿವಕುಮಾರ್ ಅವರನ್ನು ಹೊಗಳಿ , ಜಮೀರ್  ವಿರುದ್ಧ ಪರೋಕ್ಷವಾಗಿ ಟೀಕಿಸಿದರು. ಕಾರ್ಯಕ್ರಮಕ್ಕೆ ಸಿಎಂ ಇಬ್ರಾಹಿಂ ಕೂಡ ಆಗಮಿಸಿರಲಿಲ್ಲ.  ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಎಂ ಇಬ್ರಾಹಿಂ, ಅವರೆಲ್ಲಾ ಧೀಮಂತ ನಾಯಕರು, ಅವರ ಜೊತೆ ಸೇರುವುದು ಸರಿಯಲ್ಲ ಎಂದು ನಾನು ಕಾರ್ಯಕ್ರಮಕ್ಕೆ ಬರಲಿಲ್ಲ ಎಂದು ವ್ಯಂಗ್ಯವಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT