ಕೊಪ್ಪಳದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರ ಬಿಜೆಪಿ ಮುಖಂಡರು 
ರಾಜಕೀಯ

ಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕ ಕಟ್ಟುವ ಸಂಕಲ್ಪ: ಮುಖ್ಯಮಂತ್ರಿ ಬೊಮ್ಮಾಯಿ

ಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕವನ್ನು ಕಟ್ಟುವ ಸಂಕಲ್ಪವನ್ನು ತೊಟ್ಟಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೊಪ್ಪಳ: ಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕವನ್ನು ಕಟ್ಟುವ ಸಂಕಲ್ಪವನ್ನು ತೊಟ್ಟಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ವತಿಯಿಂದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಆಯೋಜಿಸಲಾಗಿದ್ದ ‘ಜನಸ್ವರಾಜ್’ ಯಾತ್ರೆಯಲ್ಲಿ  ಭಾಗವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಬಲದಿಂದ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಗೌರವದ, ಸ್ವಾಭಿಮಾನದ ಬದುಕು ಕಟ್ಟಲು, ದುಡಿಮೆಯಿಂದ ಆತ್ಮಾಭಿಮಾನದಿಂದ ಬದುಕಲು  ಎಲ್ಲ ರೀತಿಯ ಸೌಕರ್ಯ ಹಾಗೂ ಅವಕಾಶಗಳನ್ನು ಒದಗಿಸುವ ನಿಶ್ಚಯ ಮಾಡಲಾಗಿದೆ. ಅಮೃತ ಯೋಜನೆಯಡಿ ಆರೋಗ್ಯ, ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ತಲಾವಾರು ಆದಾಯ ಹೆಚ್ಚಾಗಲು, ಹಿಂದುಳಿದ ವರ್ಗಗಳು, ಎಸ್.ಸಿ.ಎಸ್.ಟಿ ಸಮುದಾಯದವರು ಹಾಗೂ ಮಹಿಳೆಯರು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿ ಸಬಲರಾಗಬೇಕು. ಅವರ ಕೌಟುಂಬಿಕ ಜೀವನದ ಗುಣಮಟ್ಟ ಹೆಚ್ಚಿ ರಾಜ್ಯದ ಒಟ್ಟು ತಲಾವಾರು ಆದಾಯ ಹೆಚ್ಚಾಗಬೇಕು ಎಂದರು. 

ದುಡಿಮೆಯಿಂದ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗುತ್ತದೆ. ಅದಕ್ಕೆ ವಿನೂತನ ಕಾರ್ಯಕ್ರಮವನ್ನು ರೂಪಿಸಿ, ಅವರೆಲ್ಲರಿಗೂ ಅವಕಾಶಗಳನ್ನು ಸರ್ಕಾರ ಮಾಡಿಕೊಡಲಿದೆ.  ರಾಜ್ಯದಲ್ಲಿ 75 ಸಾವಿರ ಎಸ್ ಸಿ/ ಎಸ್ ಟಿ ಹಾಗೂ ಹಿಂದುಳಿದವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ನಗರ ಪ್ರದೇಶಗಳ ಅಭಿವೃದ್ಧಿಗೆ ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಿಗೆ ತಲಾ 1 ಕೋಟಿ ರೂ. ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT