ಕೊಪ್ಪಳದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರ ಬಿಜೆಪಿ ಮುಖಂಡರು 
ರಾಜಕೀಯ

ಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕ ಕಟ್ಟುವ ಸಂಕಲ್ಪ: ಮುಖ್ಯಮಂತ್ರಿ ಬೊಮ್ಮಾಯಿ

ಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕವನ್ನು ಕಟ್ಟುವ ಸಂಕಲ್ಪವನ್ನು ತೊಟ್ಟಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೊಪ್ಪಳ: ಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕವನ್ನು ಕಟ್ಟುವ ಸಂಕಲ್ಪವನ್ನು ತೊಟ್ಟಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ವತಿಯಿಂದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಆಯೋಜಿಸಲಾಗಿದ್ದ ‘ಜನಸ್ವರಾಜ್’ ಯಾತ್ರೆಯಲ್ಲಿ  ಭಾಗವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಬಲದಿಂದ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಗೌರವದ, ಸ್ವಾಭಿಮಾನದ ಬದುಕು ಕಟ್ಟಲು, ದುಡಿಮೆಯಿಂದ ಆತ್ಮಾಭಿಮಾನದಿಂದ ಬದುಕಲು  ಎಲ್ಲ ರೀತಿಯ ಸೌಕರ್ಯ ಹಾಗೂ ಅವಕಾಶಗಳನ್ನು ಒದಗಿಸುವ ನಿಶ್ಚಯ ಮಾಡಲಾಗಿದೆ. ಅಮೃತ ಯೋಜನೆಯಡಿ ಆರೋಗ್ಯ, ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ತಲಾವಾರು ಆದಾಯ ಹೆಚ್ಚಾಗಲು, ಹಿಂದುಳಿದ ವರ್ಗಗಳು, ಎಸ್.ಸಿ.ಎಸ್.ಟಿ ಸಮುದಾಯದವರು ಹಾಗೂ ಮಹಿಳೆಯರು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿ ಸಬಲರಾಗಬೇಕು. ಅವರ ಕೌಟುಂಬಿಕ ಜೀವನದ ಗುಣಮಟ್ಟ ಹೆಚ್ಚಿ ರಾಜ್ಯದ ಒಟ್ಟು ತಲಾವಾರು ಆದಾಯ ಹೆಚ್ಚಾಗಬೇಕು ಎಂದರು. 

ದುಡಿಮೆಯಿಂದ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗುತ್ತದೆ. ಅದಕ್ಕೆ ವಿನೂತನ ಕಾರ್ಯಕ್ರಮವನ್ನು ರೂಪಿಸಿ, ಅವರೆಲ್ಲರಿಗೂ ಅವಕಾಶಗಳನ್ನು ಸರ್ಕಾರ ಮಾಡಿಕೊಡಲಿದೆ.  ರಾಜ್ಯದಲ್ಲಿ 75 ಸಾವಿರ ಎಸ್ ಸಿ/ ಎಸ್ ಟಿ ಹಾಗೂ ಹಿಂದುಳಿದವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ನಗರ ಪ್ರದೇಶಗಳ ಅಭಿವೃದ್ಧಿಗೆ ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಿಗೆ ತಲಾ 1 ಕೋಟಿ ರೂ. ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT