ಹಾಸನದ ಬಿಜೆಪಿ ಮುಖಂಡ ಎ ಮಂಜು 
ರಾಜಕೀಯ

'ಸೋನಿಯಾ ಗಾಂಧಿ- ಮನೇಕಾ ಗಾಂಧಿ ಬೇರೆ ಬೇರೆ ಪಕ್ಷದಲ್ಲಿ ಇಲ್ಲವೇ, ಜೆಡಿಎಸ್ ನಲ್ಲಿ ಒಳಒಪ್ಪಂದದ ಚುನಾವಣೆ ನಡೆಯುತ್ತದೆ: ಬಿಜೆಪಿ ನಾಯಕ ಎ.ಮಂಜು

ಒಂದೇ ಕುಟುಂಬದಲ್ಲಿ, ಒಂದೇ ಮನೆಯ ಸದಸ್ಯರು ಬೇರೆ ಬೇರೆ ಪಕ್ಷಗಳಲ್ಲಿರುವುದನ್ನು ನಾವು ಈ ಹಿಂದೆ ನೋಡಿದ್ದೇವೆ, ಕೇಳಿದ್ದೇವೆ. ಹಾಸನದ ಪ್ರಮುಖ ರಾಜಕೀಯ ಮುಖಂಡ ಮಾಜಿ ಸಚಿವ ಎ ಮಂಜು ಅವರ ಸ್ಥಿತಿಯೂ ಹಾಗೆಯೇ ಆಗಿದೆ.

ಹಾಸನ: ಒಂದೇ ಕುಟುಂಬದಲ್ಲಿ, ಒಂದೇ ಮನೆಯ ಸದಸ್ಯರು ಬೇರೆ ಬೇರೆ ಪಕ್ಷಗಳಲ್ಲಿರುವುದನ್ನು ನಾವು ಈ ಹಿಂದೆ ನೋಡಿದ್ದೇವೆ, ಕೇಳಿದ್ದೇವೆ. ಹಾಸನದ ಪ್ರಮುಖ ರಾಜಕೀಯ ಮುಖಂಡ ಮಾಜಿ ಸಚಿವ ಎ ಮಂಜು ಅವರ ಸ್ಥಿತಿಯೂ ಹಾಗೆಯೇ ಆಗಿದೆ.

ಅಪ್ಪ ಬಿಜೆಪಿಯಲ್ಲಿದ್ದರೆ ಮಗ ಮಂಥರ್ ಗೌಡ ಈಗ ಕಾಂಗ್ರೆಸ್ ಪಕ್ಷದಿಂದ ಕೊಡಗಿನಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದೇನು ಅಪ್ಪ ಒಂದು ಪಕ್ಷ, ಮಗ ಮತ್ತೊಂದು ಪಕ್ಷ ಎಂದು ಮಾತನಾಡಿಕೊಳ್ಳುವವರ ಬಗ್ಗೆ ಸ್ವತಃ ಎ.ಮಂಜು ಅವರು ಪ್ರತಿಕ್ರಿಯಿಸಿದ್ದಾರೆ. ಪುತ್ರ ಡಾ.ಮಂಥರ್ ಗೌಡ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುತ್ತಿರುವುದನ್ನು ತಂದೆಯಾಗಿ ಮಂಜು ಅವರು ಸಮರ್ಥಿಸಿಕೊಂಡಿದ್ದಾರೆ.

ಈ ದೇಶದಲ್ಲಿ ಸೋನಿಯಾ ಗಾಂಧಿ ಮತ್ತು ಮನೇಕಾ ಗಾಂಧಿಯವರು ಒಂದೇ ಕುಟುಂಬಕ್ಕೆ ಸೇರಿದವರಾದರೂ ಇಬ್ಬರೂ ಬೇರೆ ಬೇರೆ ಪಕ್ಷದಲ್ಲಿದ್ದಾರೆ. ದೇವೇಗೌಡ ಕುಟುಂಬದಲ್ಲಿರುವವರು ಹೊರಗಿನಿಂದ ಜಾತ್ಯತೀತ ಜನತಾದಳ ಎಂದು ಇದ್ದಾರಷ್ಟೆ. ಎಲ್ಲಾ ಪಕ್ಷದಲ್ಲಿಯೂ ಇದ್ದಾರೆ, ಅದು ಎಲ್ಲರಿಗೂ ಗೊತ್ತಿದೆ, ಯಾರೂ ಹೇಳುವುದಿಲ್ಲ. ಇಲ್ಲಿ ಒಳಒಪ್ಪಂದದ ಚುನಾವಣೆ ಮಾಡುತ್ತಾರಷ್ಟೆ ಎಂದರು.

ನಮ್ಮ ಜಿಲ್ಲೆಯಲ್ಲಿ ಒಳಒಪ್ಪಂದದ ಚುನಾವಣೆಯಾಗಲು ನಾವು ತಯಾರಿಲ್ಲ, ಈ ಕ್ಷೇತ್ರದಲ್ಲಿ ಡಾ ಮಂಥರ್ ಗೌಡ ಅಭ್ಯರ್ಥಿಯಾಗಬೇಕಿತ್ತು. ಕಾರಣಾಂತರದಿಂದ ಟಿಕೆಟ್ ತಪ್ಪಿ ಹೋಗಿದೆ, ಏಕೆ ತಪ್ಪಿಹೋಗಿದೆ ಎಂದು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದರು.

ಸೌಹಾರ್ದಯುತವಾಗಿ ವೈಯಕ್ತಿಕ ಕಾರಣಗಳಿಗೆ ನಾವು ಮೂರೂ ಪಕ್ಷದವರು ಭೇಟಿಯಾಗುತ್ತಿರುತ್ತೇವೆ, ಆದರೆ ನಾನು ಹಾಸನದಲ್ಲಿ ಯಾವುದೇ ಒಳಒಪ್ಪಂದ ಮಾಡಿಕೊಳ್ಳುವುದಿಲ್ಲ, ನೇರವಾದ ರಾಜಕಾರಣ ಮಾಡುವವನು ನಾನು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT