ಇತ್ತೀಚಿಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತಿತರರ ಚಿತ್ರ 
ರಾಜಕೀಯ

ಬಿಜೆಪಿಗೆ ಹೆದರಿ ಪಟೇಲರಿಗೆ ಗೌರವ ತೋರಿದ ಕಾಂಗ್ರೆಸ್! ವಿಡಿಯೋ ವೈರಲ್

ಇತ್ತೀಚಿಗೆ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಫೋಟೋ ಇಡದ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಸಂಭಾಷಣೆ ಮೈಕ್ ನಲ್ಲಿ ದಾಖಲಾಗಿದ್ದು, ಬಿಜೆಪಿ ಮುಖಂಡರ ವಾಕ್ ಪ್ರಹಾರಕ್ಕೆ ದಾರಿ ಮಾಡಿಕೊಟ್ಟಿದೆ.

ಬೆಂಗಳೂರು: ಇತ್ತೀಚಿಗೆ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಫೋಟೋ ಇಡದ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಸಂಭಾಷಣೆ ಮೈಕ್ ನಲ್ಲಿ ದಾಖಲಾಗಿದ್ದು, ಬಿಜೆಪಿ ಮುಖಂಡರ ವಾಕ್ ಪ್ರಹಾರಕ್ಕೆ ದಾರಿ ಮಾಡಿಕೊಟ್ಟಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಇವತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಜಯಂತಿ ಕೂಡಾ ಇದೆ. ಏಕೆ? ಅವರ ಫೋಟೋ ಇಟ್ಟಿಲ್ಲ ಎಂದು ಡಿಕೆ ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಕೇಳುತ್ತಾರೆ. ಇದಕ್ಕೆ ಪ್ರತಿಕ್ರಿಯಿಸುವ ಡಿಕೆ ಶಿವಕುಮಾರ್, ಸರ್ದಾರ್ ಪಟೇಲ್ ಅವರ ಫೋಟೋವನ್ನು ನಾವು ಇಡಲ್ಲ ಅಂತಾರೆ. ನಂತರ ಇದನ್ನೇ ಬಿಜೆಪಿಯವರು ಅಡ್ವಾನ್ ಟೆಂಜ್ ಆಗಿ ಬಳಸಿಕೊಳ್ಳುತ್ತಾರೆ. ಪಟೇಲ್ ಅವರ ಫೋಟೋ ಇಡುವಂತೆ ಶಿವಕುಮಾರ್ ಅವರಿಗೆ ಹೇಳುತ್ತಾರೆ. ನಂತರ ಶಿವಕುಮಾರ್ , ಸಿಬ್ಬಂದಿಗೆ ಹೇಳಿ ಫೋಟೋವನ್ನು ಇಡಲಾಗುತ್ತದೆ. 

ಈ ವಿಡಿಯೋವನ್ನು ಇದೀಗ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಮುಖಂಡರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮತ್ತಿತರರು ತಮ್ಮ ಟ್ವೀಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ ನಡೆಯನ್ನು ಟೀಕಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT