ರಾಜಕೀಯ

ಬಿಜೆಪಿ-ಜೆಡಿಎಸ್ ನಡುವೆ ಒಪ್ಪಂದವಾಗಿದೆ: ಜಮೀರ್

Manjula VN

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಬಿ.ಝಡ್.ಜಮೀರ್ ಅಹಮದ್ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ 25 ಸ್ಥಾನಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬದಲು ಕೇವಲ ಏಳು ಸ್ಥಾನಗಳಲ್ಲಿ ಕಣಕ್ಕಿಳಿಸಿದೆ. ಇದು ಅನುಮಾನಗಳನ್ನು ಹುಟ್ಟಿಸಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಈ ಕುರಿತು ಸ್ಪಷ್ಟನೆ ನೀಡುವಂತೆ ಜೆಡಿಎಸ್'ಗೆ ಒತ್ತಾಯಿಸಿದ ಅವರು, ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಲು ಪಕ್ಷವು ಕೆಲವೇ ಸ್ಥಾನಗಳಿಗೆ ತನ್ನನ್ನು ಸೀಮಿತಗೊಳಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕ ಅಂಕಿ ಸ್ಥಾನಕ್ಕೆ ಇಳಿಯಲಿದೆ ಎಂದು ತಿಳಿಸಿದ್ದಾರೆ.

ಬಳಿಕ ತಮ್ಮ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ನಡುವಿನ ಭಿನ್ನಾಭಿಪ್ರಾಯದ ವದಂತಿಗಳನ್ನು ತಳ್ಳಿಹಾಕಿದ ಜಮೀರ್ ಅವರು, ಇತ್ತೀಚಿನ ಪಕ್ಷದ ಕಾರ್ಯಕ್ರಮವೊಂದರಲ್ಲಿ ಬೆಂಬಲಿಗರು ತಮ್ಮ ಪರವಾಗಿ ಘೋಷಣೆಗಳನ್ನು ಎತ್ತಿದ್ದರಿಂದ ಸಂತೋಷವಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಳೆ ಪೀಡಿತ ಪ್ರದೇಶಗಳ ಪ್ರವಾಸಕ್ಕಾಗಿ ಮುಖ್ಯಮಂತ್ರಿಯನ್ನು ಟೀಕಿಸಿದ ಅವರು, ಇದು ಕೇವಲ "ಟೋಕನ್ ಗೆಸ್ಚರ್" ಆಗಿದೆ. ಇದರಿಂದ ಬೆಂಗಳೂರಿಗರಿಗೆ ಯಾವುದೇ ರೀತಿಯ ಸಹಾಯವಾಗುವುದಿಲ್ಲ ಎಂದಿದ್ದಾರೆ.

SCROLL FOR NEXT