ಇಂದಿರಾ ಗಾಂಧಿ(ಸಂಗ್ರಹ ಚಿತ್ರ) 
ರಾಜಕೀಯ

'ಇಂಡಿಯಾ ಎಂದರೆ ಇಂದಿರಾ: ಕಾಂಗ್ರೆಸ್ ಭಜನಾ ಮಂಡಳಿ ಘೋಷಿಸಿದಾಗಲೇ ಸಂವಿಧಾನದ ಆಶಯ ಮುಕ್ಕಾಗಿ ಹೋಯಿತು'

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ ಕಾಂಗ್ರೆಸ್ ಪಕ್ಷಕ್ಕೆ ಈಗ "ಸಂವಿಧಾನ ದಿನಾಚರಣೆ"ಯನ್ನು ಪ್ರತಿ ವರ್ಷ ಆಚರಿಸುವುದನ್ನು ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ ಕಾಂಗ್ರೆಸ್ ಪಕ್ಷಕ್ಕೆ ಈಗ "ಸಂವಿಧಾನ ದಿನಾಚರಣೆ"ಯನ್ನು ಪ್ರತಿ ವರ್ಷ ಆಚರಿಸುವುದನ್ನು ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಸಂಬಂಧ ಟ್ವೀಟ್  ಸಂವಿಧಾನ ದಿನಾಚರಣೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಪಕ್ಷ ತಮಗಿರುವ ಸಂವಿಧಾನ ವಿರೋಧಿ ಭಾವನೆಯನ್ನು ಜಗಜ್ಜಾಹೀರುಗೊಳಿಸಿದೆ ಸಂವಿಧಾನ ವಿರೋಧಿ ಕಾಂಗ್ರೆಸ್‌ ಎಂದು ಲೇವಡಿ ಮಾಡಿದೆ.

ತಮ್ಮ ಅಧಿಕಾರಕ್ಕೆ ಸಂಚಕಾರ ಬರುತ್ತದೆ ಎಂಬ ಕಾರಣಕ್ಕೆ ಸಂಸತ್ತು, ನ್ಯಾಯಾಂಗ, ಕಾರ್ಯಾಂಗ ವ್ಯವಸ್ಥೆಯನ್ನು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿಕೆ ಮೂಲಕ ತಮ್ಮ‌ ಕಪಿ ಮುಷ್ಠಿಯಲ್ಲಿ ಬಂಧಿಸಿದ್ದರು. ದೇಶದ ಸಂವಿಧಾನದ‌ ಮೇಲೆ ನಡೆದ ಅತಿ ದೊಡ್ಡ ಹಲ್ಲೆ ಎಂದರೆ ತುರ್ತು ಪರಿಸ್ಥಿತಿ ಹೇರಿಕೆ ಎಂದು ಟೀಕಿಸಿದೆ.

ತುರ್ತು ಪರಿಸ್ಥಿತಿಯ ಮೂಲಕ ಸಂವಿಧಾನಕ್ಕೆ  ನಕಲಿ ಗಾಂಧಿ ಕುಟುಂಬ ಅವಮಾನ ಮಾಡಿತ್ತು.  ಹಾಗಾದರೆ ಯಾರು ಸಂವಿಧಾನ ವಿರೋಧಿ?  ಯಾರು ಅಂಬೇಡ್ಕರ್‌ ವಿರೋಧಿ?  ಅಂಬೇಡ್ಕರ್‌ ರಚಿತ ಸಂವಿಧಾನವನ್ನು ಕತ್ತಲ ಕೋಣೆಯಲ್ಲಿಟ್ಟಿದ್ದು ಯಾರು? ಉತ್ತರ ಒಂದೇ, ಕಾಂಗ್ರೆಸ್‌, ಕಾಂಗ್ರೆಸ್‌, ಕಾಂಗ್ರೆಸ್ ಎಂದು ಹೇಳಿದೆ.

ಇಂದಿರಾ ಎಂದರೆ ಇಂಡಿಯಾ, ಇಂಡಿಯಾ ಎಂದರೆ ಇಂದಿರಾ ಎಂದು ಕಾಂಗ್ರೆಸ್ ಭಜನಾ ಮಂಡಳಿ ಘೋಷಣೆ ಮೊಳಗಿಸಿದಾಗಲೇ ಸಂವಿಧಾನದ ಆಶಯ ಮುಕ್ಕಾಗಿ ಹೋಯಿತು. ಈಗ ಕಾಂಗ್ರೆಸ್ ಅಧಿಕಾರ, ಜನರ ವಿಶ್ವಾಸಗಳನ್ನೆರಡನ್ನೂ ಕಳೆದುಕೊಂಡಿದೆ. ಆದರೂ ತನ್ನ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳದ  ಸಂವಿಧಾನ ವಿರೋಧಿ ಕಾಂಗ್ರೆಸ್‌ ಸಂವಿಧಾನ ದಿನಾಚರಣೆಯನ್ನು ವಿರೋಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT