ಕುಂಚಿಟಿಗ ಸಮುದಾಯದ ಸ್ವಾಮೀಜಿ ಜೊತೆ ದೇವೇಗೌಡರು 
ರಾಜಕೀಯ

ತುಮಕೂರು ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾದ ಗೌಡ್ರು: ಒಕ್ಕಲಿಗ ಮತ ಸೆಳೆಯಲು ದೇವೇಗೌಡ ತಂತ್ರ!

ಕಳೆದ ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಇಲ್ಲಿ ಶುಕ್ರವಾರ ಮನವಿ ಮಾಡಿದರು.

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಇಲ್ಲಿ ಶುಕ್ರವಾರ ಮನವಿ ಮಾಡಿದರು.

ಜೆಡಿಎಸ್ ಅಭ್ಯರ್ಥಿ ಆರ್.ಅನಿಲ್ ಕುಮಾರ್ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಾದ ‘ಜನತಾ ಸಂಗಮ’ ಸಮಾವೇಶದಲ್ಲಿ ಮಾತನಾಡಿ, ‘ನನಗೆ ಆಗಿರುವ ನೋವು ಸರಿಪಡಿಸಲು ನಿಮಗೆ ಇದೊಂದು ಅವಕಾಶ ಸಿಕ್ಕಿದೆ’ ಎಂದರು.

‘ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಸ್ಪರ್ಧಿಸುವಂತೆ ಮಾಡಿದರು. ಕೆಲವರು ರಾಜಕೀಯ ಷಡ್ಯಂತ್ರ ಮಾಡಿ ಸೋಲಿಗೆ ಕಾರಣರಾದರು. ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನನ್ನ ಸೋಲಿಗೆ ಕಾರಣರಾದವರಿಗೆ ಉತ್ತರ ಕೊಡಬೇಕು’ ಎಂದು ಕೇಳಿಕೊಂಡರು.

ಇದು ನನ್ನ ಕೊನೆಯ ಚುನಾವಣೆಯ ಪ್ರಚಾರ. ಮುಂದೆ ಬರುತ್ತೇನೊ, ಇಲ್ಲವೊ ಗೊತ್ತಿಲ್ಲ. ಯಾವ ಜನ ನನ್ನ ಕೈಬಿಟ್ಟಿದ್ದಾರೆಯೊ ಅವರೇ ನನ್ನನ್ನು ಎತ್ತಿಕೊಂಡು ಬರುತ್ತಾರೆ. ಪ್ರಾದೇಶಿಕ ಪಕ್ಷ ಉಳಿಸಿ’ ಎಂದರು.

ಡಿಸೆಂಬರ್ 10ರಂದು ನಡೆಯಲಿರುವ ಪರಿಷತ್ ಚುನಾವಣೆಯ ಪ್ರಚಾರಕ್ಕೆ ತುಮಕೂರಿನ ಒಕ್ಕಲಿಗ ಭದ್ರಕೋಟೆಯಲ್ಲಿ ಚಾಲನೆ ನೀಡಿದ 88ರ ಹರೆಯದ ದೇವೇಗೌಡರು ಶುಕ್ರವಾರ ಕೊರಟಗೆರೆ ತಾಲೂಕಿನ ಎಲೆರಾಂಪುರದಲ್ಲಿರುವ ಕುಂಚಿಟಿಗ ಒಕ್ಕಲಿಗ ಮಠದ ಶ್ರೀ ಹನುಮಂತನಾಥ ಸ್ವಾಮಿಯ ದರ್ಶನ ಪಡೆದರು.

ಅವರು ಸಮುದಾಯದ ಪ್ರಬಲ ಭದ್ರಕೋಟೆಗಳಾದ ಕೊರಟಗೆರೆ, ಮಧುಗಿರಿ ಮತ್ತು ಸಿರಾ ತಾಲೂಕುಗಳನ್ನು 12 ಗಂಟೆಗಳಲ್ಲಿ ಪ್ರಚಾರ ನಡೆಸಿದರು. ಕುಂಚಿಟಿಗ ಒಕ್ಕಲಿಗ ಸಮುದಾಯದ ಮತಗಳನ್ನು ವಿಭಜಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದರಿಂದ 2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಗೌಡರು ಸೋತಿದ್ದರು. ಸಿರಾ ಉಪಚುನಾವಣೆಯಲ್ಲಿ ಕುಂಚಿಟಿಗ ಒಕ್ಕಲಿಗ ನಾಯಕರಾದ ಡಾ.ಸಿ.ಎಂ.ರಾಜೇಶ್ ಗೌಡ ಮತ್ತು ಆಗ್ನೇಯ ಪದವೀಧರ ಕ್ಷೇತ್ರದಿಂದ ಪರಿಷತ್ ಸ್ಥಾನಕ್ಕೆ ಚಿದಾನಂದಗೌಡ ಗೆಲುವು ಸಾಧಿಸಿದರು.

ತುಮಕೂರಿನಲ್ಲಿ ಮುಂಬರುವ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಕುಂಚಿಟಿಗ ಒಕ್ಕಲಿಗ ನಾಯಕ ಎನ್.ಲೋಕೇಶ್ ಅವರನ್ನು ಕಣಕ್ಕಿಳಿಸಿದೆ. ಜೆಡಿಎಸ್ ಅಭ್ಯರ್ಥಿ ಅನಿಲ್ ಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಆರ್ ರಾಜೇಂದ್ರ  ನಾಯಕ ಸಮುದಾಯದಿಂದ ಬಂದವರು. ಗೌಡರು ಪಕ್ಷವನ್ನು ಉಳಿಸಿಕೊಳ್ಳಲು ಎಲ್ಲವನ್ನೂ ಮಾಡುತ್ತಿದ್ದರೆ, ಎರಡನೇ ಹಂತದ ನಾಯಕರು 2019ರ ಸೋಲಿನ ಸೇಡು ತೀರಿಸಿಕೊಳ್ಳಲು ಬಯಸುತ್ತಿದ್ದಾರೆ.

ಕಾಂಗ್ರೆಸ್ ಬಂಡಾಯ ನಾಯಕ ಕೆ ಎನ್ ರಾಜಣ್ಣ ಅವರು ಬಿಜೆಪಿ ಅಭ್ಯರ್ಥಿ ಜಿ ಎಸ್ ಬಸವರಾಜು ಅವರನ್ನು ಬಹಿರಂಗವಾಗಿ ಬೆಂಬಲಿಸಿ ಗೌಡರನ್ನು ಸೋಲಿಸಲು ಸಹಕರಿಸಿದ್ದರು. ಇದೀಗ ರಾಜಣ್ಣ ಅವರ ಪುತ್ರ ರಾಜೇಂದ್ರ ಕಣದಲ್ಲಿರುವುದರಿಂದ ಜೆಡಿಎಸ್ ನಾಯಕರು ಸೋಲಿನ ಸೇಡನ್ನು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ನನಗೆ ತೀವ್ರ ಜ್ವರವಿದ್ದರೂ ಕೂಡ, 2004ರ ವಿಧಾನಸಭೆ ಚುನಾವಣೆಯಲ್ಲಿ ರಾಜಣ್ಣ ಪರ ಚುನಾವಣೆ ಪ್ರಚಾರ ನಡೆಸಿದ್ದೆ ಎಂದು ದೇವೇಗೌಡರು ಹೇಳಿದರು.

ಒಕ್ಕಲಿಗ ಭದ್ರಕೋಟೆಯಾದ ಕೆಆರ್ ಪೇಟೆ ಮತ್ತು ಸಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಕಳೆದುಕೊಂಡಿತ್ತು.

ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯಲ್ಲಿ ಪಕ್ಷಕ್ಕೆ ಯಾವುದೇ ನೆಲೆಯಿಲ್ಲದ ಇತ್ತೀಚಿನ ಸೋಲಿನ ನಂತರ ಜೆಡಿಎಸ್ ತನ್ನನ್ನು ಕೇವಲ ಹಾಸನ, ಮಂಡ್ಯ, ತುಮಕೂರು, ಮೈಸೂರು-ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಎಂಬ ಆರು ಪರಿಷತ್ ಸ್ಥಾನಗಳಿಗೆ ಸೀಮಿತಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT