ನಿಖಿಲ್ ಕುಮಾರ್ 
ರಾಜಕೀಯ

'ಮೂರು ಪಕ್ಷಗಳ ಹುನ್ನಾರದಿಂದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ 'ಅಭಿಮನ್ಯು' ಪಾತ್ರದಂತೆ ಏಕಾಂಗಿಯಾಗಿ ಹೋರಾಡಿ ಸೋತೆ'

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ರೈತ ಸಂಘ ಎಲ್ಲರೂ ಪಕ್ಷಾತೀತವಾಗಿ ಒಗ್ಗೂಡಿ, ಸಂಚು ಮಾಡಿ ನನ್ನನ್ನು ಸೋಲಿಸಿದರು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ನೋವು ಹೊರ ಹಾಕಿದರು.

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ರೈತ ಸಂಘ ಎಲ್ಲರೂ ಪಕ್ಷಾತೀತವಾಗಿ ಒಗ್ಗೂಡಿ, ಸಂಚು ಮಾಡಿ ನನ್ನನ್ನು ಸೋಲಿಸಿದರು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ನೋವು ಹೊರ ಹಾಕಿದರು.

ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ಅವರು ಕುರುಕ್ಷೇತ್ರ ಸಿನಿಮಾದಲ್ಲಿ ಅಭಿಮನ್ಯು ಪಾತ್ರ ಮಾಡಿದಂತೆ ಕಳೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ, ಜೊತೆಗೆ ಮೂರು ಪಕ್ಷಗಳ ಮೂರು ಪಕ್ಷಗಳ ಹುನ್ನಾರದಿಂದ ಸೋಲಬೇಕಾಯಿತು ಎಂದು ಬೇಸರ ವ್ಯಕ್ತ ಪಡಿಸಿದರು.

ಮುಂಬರುವ ವಿಧಾನ ಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಪಕ್ಷ ಸಂಘಟನೆ ಆರಂಭಿಸಿದ್ದೇವೆ, ತಮ್ಮ ತಂದೆಯ ಕೆಲವು ಆಲೋಚನೆಗಳನ್ನು ಮುಂದಿನ ಚುನಾವಣೆಯಲ್ಲಿ ಅನುಷ್ಠಾನಗೊಳಿಸುತ್ತೇನೆ, ಜನರ ಕಷ್ಟಗಳನ್ನು ಆಲಿಸಲು ಕ್ಷೇತ್ರದಲ್ಲಿ ಮನೆ ಮಾಡಿಕೊಂಡು ಇರಬೇಕೆಂದೇನಿಲ್ಲ, ಜನರಿಗೆ ಸಹಾಯ ಮಾಡುವ ಮನಸ್ಸಿದ್ದರೇ ಸಾಕು ಎಂದು ಹೇಳಿದ್ದಾರೆ.

ಮೂರು ಪಕ್ಷಗಳ ಹುನ್ನಾರದಿಂದ ನಾನು ಸೋಲಬೇಕಾಯಿತು. ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರ ಒತ್ತಡದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೆ. ಆ ಸೋಲಿನಿಂದ ನಾನು ಧೃತಿಗೆಟ್ಟಿಲ್ಲ. ನನ್ನ ವಯಸ್ಸು ಇನ್ನೂ ಚಿಕ್ಕದಿದೆ. ಕಾರ್ಯಕರ್ತರು, ಮುಖಂಡರೊಂದಿಗೆ ಬೆರೆಯುವುದನ್ನು ತಂದೆ ಹಾಗೂ ತಾತಾ ಹೇಳಿಕೊಟ್ಟಿದ್ದಾರೆ ಎಂದು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚಿತ್ರರಂಗದಲ್ಲಿ ತಕ್ಕಮಟ್ಟಿಗೆ ಯಶಸ್ಸು ಕಂಡಿದ್ದೇನೆ. ಇಂತಹ ಸಂದರ್ಭದಲ್ಲಿ ಪಕ್ಷ ನನಗೆ ದೊಡ್ಡ ಜವಾಬ್ದಾರಿ ನೀಡಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ನಾನು ಆಕಸ್ಮಿಕವಾಗಿ ಅಭ್ಯರ್ಥಿಯಾದೆ. ಸ್ಥಾನಮಾನಗಳು ಬೇಕೆಂದು ಹುಚ್ಚಿಡಿಸಿಕೊಂಡು ಅಭ್ಯರ್ಥಿಯಾಗಲಿಲ್ಲ. ನನಗೆ ಅಧಿಕಾರದ ಹುಚ್ಚಿದ್ದರೆ 2018 ರಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಆರ್ ಶಿವರಾಮೇಗೌಡ ಅವರಿಗೆ ಟಿಕೆಟ್ ಕೊಡದೆ ನಾನೇ ನಿಲ್ಲುತ್ತಿದ್ದೆ. ತಂದೆಯ ಹೆಸರಿನಿಂದ ಅಧಿಕಾರ ಹಿಡಿಯಬೇಕಾದ ಪರಿಸ್ಥಿತಿ ನನಗೆ ಬಂದಿಲ್ಲ ಅಂತ ನಿಖಿಲ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT